ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ರಾಜ್ಯ ಟೇಕ್ವಾಂಡೋ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಎಐಟಿ ಆಶ್ರಯದಲ್ಲಿ ನಡೆಯುತ್ತಿರುವ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆಯನ್ನು ಎಐಟಿ ಆವರಣದಲ್ಲಿ ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
2008 ರಲ್ಲಿ ಟೇಕ್ವಾಂಡೋ ಪ್ರಾರಂಭವಾದಾಗ ನಾನು ನಗರಸಭೆ ಅಧ್ಯಕ್ಷನಾಗಿ ಉದ್ಘಾಟಿಸಿದ್ದೆ. ಯೋಗಾಯೋಗ ಈಗ ರಾಜ್ಯಮಟ್ಟದ ಪ್ರಥಮ ಟೇಕ್ವಾಂಡೋ ಸ್ಪರ್ಧೆಯನ್ನು ಉದ್ಘಾಟಿಸುವ ಭಾಗ್ಯ ನನಗೆ ದೊರೆತಿರುವುದು ಸಂತೋಷವಾಗಿದೆ. ನಮ್ಮ ಸರ್ಕಾರ ಎಲ್ಲಾ 34 ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೀಡುವ ಶೇ.2 ರಷ್ಟು ಮೀಸಲನ್ನು ಟೇಕ್ವಾಂಡೋ ಪಟುಗಳಿಗೂ ವಿಸ್ತರಿಸಿದೆ. ಇದು ಸಂತೋಷದ ವಿಚಾರ ಎಂದರು.ಜಿಲ್ಲೆಯ ಟೇಕ್ವಾಂಡೋ ತರಬೇತುದಾರ ಗಿರೀಶ್ ಅವರ ಉತ್ತೇಜನದಿಂದ ಇಲ್ಲಿನ ನಿರೀಕ್ಷಾ ನಾಡಿಗ್ ಮತ್ತು ರಾಹುಲ್ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವಂತಾಗಿದೆ. ನಮ್ಮ ಸರ್ಕಾರ ಒಲಂಪಿಕ್ನಲ್ಲಿ ಚಿನ್ನ ಗೆದ್ದವರಿಗೆ 7.5 ಕೋಟಿ, ಬೆಳ್ಳಿ ಗೆದ್ದವರಿಗೆ 5 ಕೋಟಿ, ಕಂಚು ಗೆದ್ದವರಿಗೆ 3 ಕೋಟಿ ನೀಡುತ್ತಿದೆ. ಇದು ಇತರೆ ಯಾವುದೇ ರಾಜ್ಯದಲ್ಲಿ ಇಲ್ಲ ಎಂದು ಹೇಳಿದ ಅವರು, ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಬರಿ ಶಿಕ್ಷಣಕ್ಕೆ ಸೀಮಿತಗೊಳಿಸದೆ ಕ್ರೀಡೆಗಳಿಗೂ ಪ್ರೋತ್ಸಾಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಿಡಿಪಿಐ ಪುಟ್ಟರಾಜು, ರಾಜ್ಯ ಟೇಕ್ವಾಂಡೋ ಸಂಸ್ಥೆಯ ಅಧ್ಯಕ್ಷ ಸಂಜೀವ್ಕುಮಾರ್, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಬಿಇಒ ರವೀಶ್, ಜಿಲ್ಲಾ ಟೇಕ್ವಾಂಡೋ ಸಂಸ್ಥೆಯ ಅಧ್ಯಕ್ಷ ಸಂತೋಷ್ಕುಮಾರ್, ತರಬೇತುದಾರ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಯಧು ಕುಮಾರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಾನಾಯ್ಕ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ, ಡಿ.ಪಿ.ಕುಮಾರಸ್ವಾಮಿ, ಪರಮೇಶ್ವರಪ್ಪ, ಮಂಜುನಾಥ್, ಉಮೇಶ್, ಪ್ರವೀಣ್ ಪಿಂಟೋ, ಶಿವಪ್ಪ, ಸೈಯದ್ ರಿಯಾಜ್ ಉಪಸ್ಥಿತರಿದ್ದರು.