ಅಚ್ಚರಿಯ ಬೆಳವಣಿಗೆಯಲ್ಲಿ ಪುರಸಭೆ ಅಧ್ಯಕ್ಷೆಯಾಗಿ ರೇಷ್ಮಾ ಸಿಕಂದರ್ ಆಯ್ಕೆ

KannadaprabhaNewsNetwork |  
Published : May 01, 2026, 02:00 AM IST
ಹಗರಿಬೊಮ್ಮನಹಳ್ಳಿಯ ಪುರಸಭೆಗೆ ನೂತನ ಅಧ್ಯಕ್ಷೆಯಾಗಿ ಗುರುವಾರ ಆಯ್ಕೆಯಾದ ರೇಷ್ಮಾ ಸಿಕಂದರ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

೮ನೇ ವಾರ್ಡ್‌ ಸದಸ್ಯೆ ಕೆ.ರೇಷ್ಮಾ ಸಿಕಂದರ್ ೧೩ ಮತಗಳನ್ನು ಪಡೆದು ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಚುನಾಯಿತರಾದರು.

ಹಗರಿಬೊಮ್ಮನಹಳ್ಳಿ: ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ೮ನೇ ವಾರ್ಡ್‌ ಸದಸ್ಯೆ ಕೆ.ರೇಷ್ಮಾ ಸಿಕಂದರ್ ೧೩ ಮತಗಳನ್ನು ಪಡೆದು ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಚುನಾಯಿತರಾದರು.

ಮೊದಲ ಆವಧಿಗೆ ಅಧ್ಯಕ್ಷರಾಗಿ ಚುನಾಯಿತರಾಗಿದ್ದ ಮರಿರಾಮಣ್ಣ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಬಿಜೆಪಿಯಿಂದ ಬಣಕಾರ್ ಸುರೇಶ್ ಮತ್ತು ಕಾಂಗ್ರೆಸ್‌ನಿಂದ ರೇಷ್ಮಾ ಸಿಕಂದರ್ ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿಯಿಂದ ವಿಪ್ ಜಾರಿಯಾಗಿದ್ದರೂ ಸದಸ್ಯರಾದ ಚನ್ನಮ್ಮ ವಿಜಯಕುಮಾರ್, ಮಲ್ಲೇಶ್ವರಿ ಭರತ್ ಮತ್ತು ಬೋವಿ ವೀರೇಶ್ ಚುನಾವಣೆಯಿಂದ ದೂರ ಉಳಿದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸಂಸದ ಈ.ತುಕಾರಾಮ್ ಮತ ಚಲಾಯಿಸಿದರೆ, ಬಿಜೆಪಿ ಅಭ್ಯರ್ಥಿ ಪರವಾಗಿ ಶಾಸಕ ನೇಮರಾಜ್ ನಾಯ್ಕ ಮತ ಚಲಾಯಿಸಿದರು.

ಕಾಂಗ್ರೆಸ್‌ನ ರೇಷ್ಮಾ ಸಿಕಂದರ್ ೧೩ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ೯ ಮತಗಳನ್ನು ಪಡೆದ ಬಿಜೆಪಿಯ ಬಣಕಾರ್ ಸುರೇಶ್ ಪರಾಭವಗೊಂಡರು. ಸಂಸದ ಈ.ತುಕಾರಾಮ್ ಮಾತನಾಡಿ, ಪುರಸಭೆಯ ಎಲ್ಲ ಸದಸ್ಯರ ವಿಶ್ವಾಸ ಪಡೆದು ಪಟ್ಟಣದ ಅಭಿವೃದ್ಧಿ ಸಾಧಿಸುವಂತೆ ಸೂಚಿಸಿದರು. ಮಾಜಿ ಶಾಸಕ ಭೀಮಾನಾಯ್ಕ, ಸದಸ್ಯ ಪವಾಡಿ ಹನಮಂತಪ್ಪ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್, ಹಾಲ್ದಾಳ್ ವಿಜಯಕುಮಾರ್ ಇದ್ದರು.

ಹಗರಿಬೊಮ್ಮನಹಳ್ಳಿಯ ಪುರಸಭೆಗೆ ನೂತನ ಅಧ್ಯಕ್ಷೆಯಾಗಿ ಗುರುವಾರ ಆಯ್ಕೆಯಾದ ರೇಷ್ಮಾ ಸಿಕಂದರ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಶಿರಹಟ್ಟಿಯ ಫಕೀರೇಶ್ವರ ರಥೋತ್ಸವ
ಎಚ್ಐವಿಗೆ ಸೂಕ್ತ ಚಿಕಿತ್ಸೆ ಪಡೆಯಲಿ: ಡಿ.ಎನ್. ಚಂದ್ರಶೇಖರ