ವಸತಿ ಶಾಲೆ ನೌಕರರಿಂದ ಮುಂದುವರಿದ ಪ್ರತಿಭಟನೆ

KannadaprabhaNewsNetwork |  
Published : May 30, 2025, 01:32 AM IST
ಫೋಟೋ : ೨೯ಕೆಎಂಟಿ_ಎಂಎವೈ_ಕೆಪಿ೪ : ಹೆಗಡೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ನೌಕರರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಶುಕ್ರವಾರ ತರಗತಿಗಳನ್ನು ನಡೆಸದೇ ಅಸಹಕಾರ ತೋರಲಾಗುವುದು.

ಕುಮಟಾ: ವೃತ್ತಿಪರ ಬೇಡಿಕೆಗಳ ಈಡೇರಿಕೆಗಾಗಿ ಉತ್ತರ ಕನ್ನಡ ಜಿಲ್ಲಾದ್ಯಂತ ಗುರುವಾರ ಎಲ್ಲ ೨೪ ವಸತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ನೌಕರರು ಕಪ್ಪುಪಟ್ಟಿ ಧರಿಸಿ ಸತ್ಯಾಗ್ರಹ ಮಾದರಿಯ ಹೋರಾಟ ನಡೆಸಿದ್ದು, ಶುಕ್ರವಾರ ತರಗತಿಗಳನ್ನು ನಡೆಸದೇ ಅಸಹಕಾರ ತೋರಲಾಗುವುದು ಎಂದು ವಸತಿ ಶಾಲೆಗಳ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಲಕ್ಷ್ಮೀ ಶೆಟ್ಟಿ, ಜಿಲ್ಲಾಧ್ಯಕ್ಷ ಶಂಕರ ಕುರುಬರ್ ಜಂಟಿಯಾಗಿ ತಿಳಿಸಿದ್ದಾರೆ.

ಈಗಾಗಲೇ ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನವನ್ನು ಸೆಳೆಯಲು ಮೇ ೨೬ರಿಂದ ಸಂವಿಧಾನಾತ್ಮಕ ಸತ್ಯಾಗ್ರಹ ಕೈಗೊಂಡಿದ್ದೇವೆ. ಬೇಡಿಕೆಗಳು ಈಡೇರುವ ತನಕ ವಿವಿಧ ರೂಪದಲ್ಲಿ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ವಸತಿ ಶಿಕ್ಷಣ ನಿರ್ದೇಶನಾಲಯ ರಚಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸುವುದು, ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡುವುದು ಮತ್ತು ಶೇ. ೧೦ ವಿಶೇಷ ಭತ್ಯೆ ಮಂಜೂರಾತಿಯ ಬೇಡಿಕೆಯೊಂದಿಗೆ ಶಾಲೆಯ ಪ್ರಥಮ ದಿನ ಕಪ್ಪು ಪಟ್ಟಿ ಕಟ್ಟಿಕೊಂಡು ಶಾಲೆಗೆ ಶಿಕ್ಷಕರು ಸಿಬ್ಬಂದಿ ಹಾಜರಾದರು. ಮೇ ೩೧ರಂದು ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವುದು. ಬೇಡಿಕೆ ಈಡೇರದಿದ್ದರೆ ಜೂ. ೨ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ