ಕನ್ನಡಪ್ರಭ ವಾರ್ತೆ ಹಾಸನ
ಸಂಘದ ಜಿಲ್ಲಾಧ್ಯಕ್ಷೆ ಸಿ.ಎನ್.ಉಷಾ ಮಾತನಾಡಿ, ಮೇ ೨೬ ರಿಂದ ೨೮ ರವರೆಗೆ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಹೋರಾಟ ಮಾಡಲಾಗಿದ್ದು, ತರಗತಿ ಬಹಿಷ್ಕರಿಸಿ ಈಗ ಜಿಲ್ಲಾ ಮಟ್ಟದಲ್ಲಿ ಪ್ರತಿಭಟಿಸಲಾಗಿದೆ. ಇಷ್ಟಕ್ಕೂ ಸೂಕ್ತ ರೀತಿಯ ಸ್ಪಂದನೆ ಸಿಗದೇ ಹೋದರೆ ಜೂ.೨ ರಿಂದ ರಾಜ್ಯಾದ್ಯಂತ ಡೀಸಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದರು. ಬೇರೆ ವಸತಿ ಶಾಲೆಗಳ ಶಿಕ್ಷಕರಿಗೆ ಹೋಲಿಸಿದರೆ ನಾವು ಅನೇಕ ರೀತಿಯ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಅವುಗಳನ್ನು ಈಡೇರಿಸಿ ಎಂದು ರಾಜ್ಯಾದ್ಯಂತ ಕ್ರೈಸ್ ಸಂಸ್ಥೆಯಡಿ ಇರುವ ಸುಮಾರು ೬೮೦೦ ಮಂದಿ ಇರುವ ಕಾಯಂ ಶಿಕ್ಷಕರು ಕಳೆದ ೧೩ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ, ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದರು.
ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಬಡ ಪ್ರತಿಭಾವಂತ ಮಕ್ಕಳು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೊದಲಾದ ವಸತಿ ಶಾಲೆಗಳಲ್ಲಿ ಕಲಿಯುತ್ತಿದ್ದು, ಓದುವುದರಿಂದ ಹಿಡಿದು, ಪ್ರತಿಭಾ ಕಾರಂಜಿ ಮೊದಲಾದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಮ್ಮ ಶಾಲೆಗಳ ಮಕ್ಕಳೇ ಉತ್ತಮ ಪ್ರತಿಭೆ ಪ್ರದರ್ಶನ ಮಾಡುತ್ತಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ನಮ್ಮ ಶಾಲೆಯ ಮಕ್ಕಳೂ ರಾಜ್ಯಮಟ್ಟದ ರ್ಯಾಂಕ್ ಪಡೆಯುತ್ತಿದ್ದಾರೆ. ನಾವು ನೀಡುವ ಗುಣಾತ್ಮಕ ಶಿಕ್ಷಣದಿಂದ ಸರ್ಕಾರಿ ಶಾಲೆಗಳಿಗಿಂತಲೂ ನಮ್ಮ ಶಾಲೆಗಳ ಫಲಿತಾಂಶ ಶೇ.೯೧ ಕ್ಕಿಂತಲೂ ಅಧಿಕ ಇದೆ. ಇದಕ್ಕೆ ನಾವು ೨೪*೭ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದೂ ಕಾರಣ. ಆದರೂ ನಮಗೆ ಕೊಡಬೇಕಾದ ಸೌಲಭ್ಯ ಕೊಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು. ನಾವು ೬ ರಿಂದ ೧೦ನೇ ತರಗತಿವರೆಗೂ ಬೋಧನೆ ಮಾಡುತ್ತಿದ್ದೇವೆ. ಗುಣಮಟ್ಟ ಹಾಗೂ ಮೌಲ್ಯಯುತ ಶಿಕ್ಷಣ ನೀಡುತ್ತಿರುವುದರಿಂದ ೫೨ ಸಾವಿರ ಮಕ್ಕಳು ಸಾಮರ್ಥ್ಯದ ವಸತಿ ಶಾಲೆಗಳ ಪ್ರವೇಶಕ್ಕಾಗಿ ಬರೋಬ್ಬರಿ ೨.೭೦ ಲಕ್ಷ ಅರ್ಜಿ ಬಂದಿವೆ. ಒಟ್ಟಾರೆಯಾಗಿ ನಾವು ಸರ್ಕಾರಿ ಶಿಕ್ಷಕರಿಗಿಂತ ಹೆಚ್ಚು ಕೆಲಸ ಮಾಡಿದರೂ, ಅವರಂತೆಯೇ ಸಮಾನವಾದ ಸೌಲಭ್ಯ ಇಲ್ಲವಾಗಿದೆ. ಜಿ.ಕುಮಾರನಾಯಕ್ ವರದಿ ಸೌಲಭ್ಯ ನಮಗೆ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಶಿಕ್ಷಕರ ಬೇಡಿಕೆಗಳೇನು:
ಹಾಗೆಯೇ ಕರ್ನಾಟಕ ಆರೋಗ್ಯ ಸಂಜೀವಿನಿ ಸೌಲಭ್ಯ ನಮಗೂ ಸಿಗಬೇಕು. ಮರಣ- ನಿವೃತ್ತಿ ಉಪಧನ(ಡಿಸಿಆರ್ಜಿ) ನಮಗೂ ಸಿಗಬೇಕು ಎಂದು ಮನವಿ ಮಾಡಿದರು.