ಸತ್ಯ ಹೇಳಿದ ಸಚಿವರಿಂದ ರಾಜೀನಾಮೆ: ಶಾಸಕ ಸುನಿಲ್ ಕುಮಾರ್ ಟೀಕೆ

KannadaprabhaNewsNetwork |  
Published : Aug 12, 2025, 12:32 AM IST
ಸುನಿಲ್‌ | Kannada Prabha

ಸಾರಾಂಶ

ಸತ್ಯಮೇವ ಜಯತೆ ಎಂದು ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುವ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂಬುದು ಇತ್ತೀಚಿನ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಸತ್ಯವನ್ನು ಒಪ್ಪಿಕೊಂಡ ಸಚಿವನನ್ನು ವಜಾಗೊಳಿಸುವುದು ಕಾಂಗ್ರೆಸ್‌ನ ನೈತಿಕ ದಿವಾಳಿತನದ ಉದಾಹರಣೆ ಎಂದು ಸುನಿಲ್‌ ಕುಮಾರ್‌ ಟೀಕಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ಮತಗಳ್ಳತನ ಕುರಿತು ರಾಹುಲ್ ಗಾಂಧಿ ಮಾಡಿದ್ದ ಆರೋಪದ ವಿಚಾರಕ್ಕೆ ಸಂಬಂಧಿಸಿ ಸಚಿವ ಕೆ.ಎನ್. ರಾಜಣ್ಣ ಅವರು ‘ನಮ್ಮ ಕಾಲದಲ್ಲೇ ಮತಪಟ್ಟಿ ಪರಿಷ್ಕರಣೆ ನಡೆದಿತ್ತು’ ಎಂದು ಸತ್ಯ ಹೇಳಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ಅವರ ಮೇಲೆ ಒತ್ತಡ ಹೇರಿದ ಪರಿಣಾಮ ರಾಜೀನಾಮೆ ಪಡೆಯಲಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿರುವ ವಿ.ಸುನೀಲ್ ಕುಮಾರ್, ಸತ್ಯಮೇವ ಜಯತೆ ಎಂದು ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುವ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂಬುದು ಇತ್ತೀಚಿನ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಸತ್ಯವನ್ನು ಒಪ್ಪಿಕೊಂಡ ಸಚಿವನನ್ನು ವಜಾಗೊಳಿಸುವುದು ಕಾಂಗ್ರೆಸ್‌ನ ನೈತಿಕ ದಿವಾಳಿತನದ ಉದಾಹರಣೆ ಎಂದು ಟೀಕಿಸಿದ್ದಾರೆ.

ಸತ್ಯ ಹೇಳಿದ ಕಾರಣಕ್ಕೆ ಸಚಿವ ಸ್ಥಾನ ಕಳೆದುಕೊಳ್ಳಬೇಕಾದರೆ, ಅದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನರಿಗೆ ನಿಖರವಾದ ಮಾಹಿತಿ ನೀಡಿದವರನ್ನು ಗೌರವಿಸುವ ಬದಲು, ಅವರನ್ನು ರಾಜಕೀಯ ಬಲಿಯಾಡು ಮಾಡುವ ಪದ್ಧತಿ ದುರ್ಭಾಗ್ಯಕರ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ರಾಜಣ್ಣ ಅವರ ರಾಜೀನಾಮೆ ಕಾಂಗ್ರೆಸ್ ಒಳ ಗೊಂದಲಕ್ಕೆ ಹೊಸ ಬಣ್ಣ ತುಂಬಿದೆ ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ