ಸಂಕಲ್ಪಗಳು ದೇವರ ಕೃಪೆಯಿಂದ ಈಡೇರುತ್ತವೆ: ಹಿರೇಕಲ್ಮಠ ಶ್ರೀ

KannadaprabhaNewsNetwork |  
Published : Feb 17, 2026, 01:30 AM IST
ಹೊನ್ನಾಳಿ ಫೋಟೋ 16ಎಚ್.ಎಲ್.ಐ ಹೊನ್ನಾಳಿ ಹಿರೇಕಲ್ಮಠದಲ್ಲಿ ಫೆ 27ರಿಂದ ಮಾರ್ಚ 2ರವರೆಗೆ ನಡೆಯಲಿರುವ ರಾಜ್ಯ ಮಟ್ಟದ ಕೃಷಿ ಮೇಳೆ ಕುರಿತಂತೆ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿ ಸಾನಿಧ್ಯದಲ್ಲಿ  ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಾಗೂ ಕೃಷಿ ಮೇಳೆದ ಕರ ಪತ್ರ ಲೋಕಾರ್ಪಣೆ ನಡೆಯಿತು.      | Kannada Prabha

ಸಾರಾಂಶ

ಸದುದ್ದೇಶದ ಸಂಕಲ್ಪಗಳು ದೇವರ ಆಶೀರ್ವಾದದಿಂದ ಯಶಸ್ವಿಯಾಗಿ ಈಡೇರುತ್ತವೆ. ಜನಸೇವೆ ಲಿಂಗೈಕ್ಯ ಗುರುಗಳ ಪ್ರೇರಣೆಯಾಗಿದ್ದು, ಯಾವಾಗಲೂ ಶುಭಸೂಚಕವಾಗಿರುತ್ತದೆ. ಸಮಯ ಕಡಿಮೆ ಎಂಬ ಭಾವನೆ ಇಲ್ಲದೇ ನಾವೆಲ್ಲರೂ ಕೂಡ ದೃಢ ಸಂಕಲ್ಪದಿಂದ 4 ದಿನಗಳ ರಾಜ್ಯಮಟ್ಟದ ಕೃಷಿ ಮೇಳವನ್ನು ಹಿರೇಕಲ್ಮಠದಲ್ಲಿ ನಡೆಸಲು ಕೆಲಸ ಮಾಡೋಣ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿ ನುಡಿದಿದ್ದಾರೆ.

- ಹೊನ್ನಾಳಿ ಹಿರೇಕಲ್ಮಠದಲ್ಲಿ 4 ದಿನಗಳ ರಾಜ್ಯಮಟ್ಟದ ಕೃಷಿಮೇಳ ಹಿನ್ನೆಲೆ ಪೂರ್ವಭಾವಿ ಸಭೆ । ಕರಪತ್ರ ಬಿಡುಗಡೆ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಸದುದ್ದೇಶದ ಸಂಕಲ್ಪಗಳು ದೇವರ ಆಶೀರ್ವಾದದಿಂದ ಯಶಸ್ವಿಯಾಗಿ ಈಡೇರುತ್ತವೆ. ಜನಸೇವೆ ಲಿಂಗೈಕ್ಯ ಗುರುಗಳ ಪ್ರೇರಣೆಯಾಗಿದ್ದು, ಯಾವಾಗಲೂ ಶುಭಸೂಚಕವಾಗಿರುತ್ತದೆ. ಸಮಯ ಕಡಿಮೆ ಎಂಬ ಭಾವನೆ ಇಲ್ಲದೇ ನಾವೆಲ್ಲರೂ ಕೂಡ ದೃಢ ಸಂಕಲ್ಪದಿಂದ 4 ದಿನಗಳ ರಾಜ್ಯಮಟ್ಟದ ಕೃಷಿ ಮೇಳವನ್ನು ಹಿರೇಕಲ್ಮಠದಲ್ಲಿ ನಡೆಸಲು ಕೆಲಸ ಮಾಡೋಣ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿ ನುಡಿದರು.

ಹೊನ್ನಾಳಿ ಹಿರೇಕಲ್ಮಠದ ಹಿಂದಿನ ಲಿಂಗೈಕ್ಯ ಗುರುಗಳಾದ ಶ್ರೀ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಅವರ 56ನೇ ಹಾಗೂ ಲಿಂ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರ 11ನೇ ಪುಣ್ಯಸ್ಮರಣೆ ಅಂಗವಾಗಿ ಪಟ್ಟಣದ ಹಿರೇಕಲ್ಮಠದಲ್ಲಿ ಫೆ.27, 28 ರಿಂದ ಹಾಗೂ ಮಾರ್ಚ್ 1 ಮತ್ತು 2ರಂದು ಒಟ್ಟು 4 ದಿನಗಳ ರಾಜ್ಯಮಟ್ಟದ ಕೃಷಿಮೇಳ ನಡೆಸುವ ಕುರಿತು ಹಿರೇಕಲ್ಮಠದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆ ಹಾಗೂ ಕೃಷಿಮೇಳದ ಕರಪತ್ರ ಬಿಡುಗಡೆ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ದೂರವಾಣಿ ಕರೆ ಮೂಲಕ ಚರ್ಚೆ ಮಾಡಲಾಗಿದೆ. ಎಲ್ಲ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಇದರಂತೆ ಸ್ಥಳೀಯ ಶಾಸಕರು, ಮಾಜಿ ಶಾಸಕರು, ಜಿಲ್ಲಾಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಇಂದು ಸೋಮವಾರ, ಶಾಸಕ ಡಿ.ಜಿ.ಶಾಂತನಗೌಡ ನೇತೃತ್ವದಲ್ಲಿ ತಾಲೂಕುಮಟ್ಟದ ನಾಯಕರು, ಅಧಿಕಾರಿಗಳ ಪೂರ್ವಭಾವಿ ಸಭೆ ಕರೆಯಲಾಗಿದೆ. ಸೋಮವಾರ ಮಧ್ಯಾಹ್ನ ದಾವಣಗೆರೆಗೆ ತೆರಳಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಗ್ರವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿದ್ದ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ವಾಸ್ತವಿಕವಾಗಿ ರಾಜ್ಯಮಟ್ಟದ ಕೃಷಿ ಮೇಳ ನಡೆಸಲು ಸಮಯವಕಾಶ ಕಡಿಮೆ ಇದೆ. ತಮ್ಮ ಬೆಂಬಲಕ್ಕೆ ಹಿರೇಕಲ್ಮಠದ ಸ್ವಾಮೀಜಿ ಅವರ ಆಶೀರ್ವಾದವಿದೆ. ಕೃಷಿಮೇಳದ ಜವಾಬ್ದಾರಿಯನ್ನು ನ್ಯಾಮತಿ, ಹೊನ್ನಾಳಿ ಅವಳಿ ತಾಲೂಕು ಹಾಗೂ ಶ್ರೀಮಠದ ಭಕ್ತರ ಬೆಂಬಲದೊಂದಿಗೆ ಸವಾಲಾಗಿ ಸ್ವೀಕರಿಸಿದ್ದೇನೆ. ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಹಾಲಿ, ಮಾಜಿ, ಜನಪ್ರತಿನಿಧಿಗಳು, ಅಧಿಕಾರಿಗಳು, ಮಠದ ಕಾರ್ಯಕರ್ತರು, ಭಕ್ತರು ಸೇರಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡೋಣ ಎಂದರು.

ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ವಿಶೇಷವಾಗಿ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಇಲಾಖೆಗಳು ಸೇರಿದತೆ ಎಲ್ಲ ಇಲಾಖೆಗಳ ಅಧಿಕಾರಿಗಳ ಸಹಕಾರದಿಂದ ನಾವೆಲ್ಲರೂ ಸೇರಿ ಕಾರ್ಯಕ್ರಮ ಮಾಡೋಣ ಎಂದರು.

ಮಾಜಿ ಸಚಿವ ಎಂ.ಪಿ. ರೇಣುಕಾರ್ಯ ಮಾತನಾಡಿ, ಕಾರ್ಯಕ್ರಮ ಮಾಡುವ ಬಗ್ಗೆ ತಮ್ಮದೂ ಕೂಡ ಸಹಕಾರವಿದೆ. ಆದರೆ, ವಾಸ್ತವಿಕವಾಗಿ ಸಮಯ ತೀರಾ ಕಡಿಮೆ ಇದೆ. ಈ ಬಗ್ಗೆ ಸ್ವಾಮೀಜಿ ಸೇರಿದಂತೆ ಜನಪ್ರತಿನಿಧಿಗಳು, ಹಿರಿಯರು ಕೂಲಂಕುಶವಾಗಿ ಸಾಧಕ-ಬಾಧಕಗಳ ಬಗ್ಗೆ ಚಿಂತನೆ ಮಾಡಬೇಕಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಂಗ್ರೆಸ್ ರಾಜ್ಯ ಒಬಿಸಿ, ಉಪಾಧ್ಯಕ್ಷ ಎಚ್.ಎ., ಉಮಾಪತಿ ಮಾತನಾಡಿ, ಶ್ರೀ ಮಠದ ವತಿಯಿಂದ ಈಗಾಗಲೇ ಎರಡು ಬಾರಿ ರಾಜ್ಯಮಟ್ಟದ ಕೃಷಿ ಮೇಳ ಯಶಸ್ವಿಯಾಗಿ ಮಾಡಲಾಗಿದೆ. ಕೃಷಿ ಮೇಳಗಳಿಂದ ಅನ್ನದಾತ ರೈತರಿಗೆ ಹೊಸ ತಂತ್ರಜ್ಞಾನದ ಕೃಷಿ ಸಲಕರಣೆಗಳು, ಕೃಷಿ ಪದ್ಧತಿಗಳ ಪರಿಚಯವಾಗುತ್ತದೆ. ರೈತರ ಹಿತದೃಷ್ಠಿಯಿಂದ ಕೃಷಿ ಮೇಳ ಜ್ಞಾನಾರ್ಜನೆಯ ವೇದಿಕೆಯಾಗಲಿದೆ ಎಂದು ಹೇಳಿದರು.

ಪೂರ್ವಭಾವಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ, ತಹಸೀಲ್ದಾರ್ ರಾಜೇಶ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಲೀಲಾವತಿ, ಹೊನ್ನಾಳಿ ತಾಪಂ ಅಧಿಕಾರಿ ಅಶೋಕ, ನ್ಯಾಮತಿ ರಾಘವೇಂದ್ರ ಬೆಸ್ಕಾಂನ ಶ್ರೀನಿವಾಸ, ಕೃಷಿ ಇಲಾಖೆ ವಿಶ್ವನಾಥ್, ತೋಟಗಾರಿಕೆ ಅಧಿಕಾರಿ ರೇಖಾ, ಜನಕಲ್ಯಾಣ ಸೇವಾ ಟ್ರಸ್ಟ್‌ನ ಸುರೇಶ್, ಹೊಸಕೇರಿ, ಕತ್ತಿಗೆ ನಾಗರಾಜ್, ಕುಮಾರ ಸ್ವಾಮಿ, ಬಿಜೆಪಿ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್ ಸೇರಿದಂತೆ ಅನೇಕ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

- - -

-16ಎಚ್.ಎಲ್.ಐ:

ಹೊನ್ನಾಳಿ ಹಿರೇಕಲ್ಮಠದಲ್ಲಿ ಫೆ.27ರಿಂದ ಮಾ.2ರವರೆಗೆ ನಡೆಯಲಿರುವ ರಾಜ್ಯಮಟ್ಟದ ಕೃಷಿ ಮೇಳ ಕುರಿತಂತೆ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಾಗೂ ಕೃಷಿ ಮೇಳದ ಕರಪತ್ರ ಬಿಡುಗಡೆಗೊಳಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲಾ ಹಂತದಲ್ಲೇ ಮಕ್ಕಳನ್ನು ದಂಡಿಸದಿದ್ದರೆ ಅಪಾಯ: ನಿಶ್ಚಲಾನಂದನಾಥ ಸ್ವಾಮೀಜಿ
ಜಾತ್ರೆ: ಎಸ್‌ಪಿ ನೇತೃತ್ವದಲ್ಲಿ ಜನಜಾಗೃತಿ ಪಥ ಸಂಚಲನ