ಶಾಲೆಗಳ ಮಾನ್ಯತೆ ನವೀಕರಣ ಗೊಂದಲ ಇತ್ಯರ್ಥಪಡಿಸಿ

KannadaprabhaNewsNetwork |  
Published : Feb 11, 2026, 01:45 AM IST
10ಕೆಡಿವಿಜಿ3-ದಾವಣಗೆರೆಯಲ್ಲಿ ಮಂಗಳವಾರ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಎಂ.ಎಸ್.ಸಂತೋಷಕುಮಾರ, ಸಹ ಕಾರ್ಯದರ್ಶಿ ಸಹನಾ ರವಿ, ಖಜಾಂಚಿ ಎಚ್.ಜೆ.ಮೈನುದ್ದೀನ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಹತ್ತನೇ ತರಗತಿ ಪರೀಕ್ಷೆ ಸಮೀಪಿಸುತ್ತಿದ್ದು, ಮಕ್ಕಳಿಗೆ ತೊಂದರೆ ಆಗದಂತೆ ರಾಜ್ಯದ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಗೊಂದಲ ಇತ್ಯರ್ಥಪಡಿಸುವಂತೆ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟವು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

- ₹200 ಕೋಟಿ ಬಾಕಿ ಪಾವತಿಸಿ: ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ ಆಗ್ರಹ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಹತ್ತನೇ ತರಗತಿ ಪರೀಕ್ಷೆ ಸಮೀಪಿಸುತ್ತಿದ್ದು, ಮಕ್ಕಳಿಗೆ ತೊಂದರೆ ಆಗದಂತೆ ರಾಜ್ಯದ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಗೊಂದಲ ಇತ್ಯರ್ಥಪಡಿಸುವಂತೆ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟವು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ನಗರದಲ್ಲಿ ಮಂಗಳವಾರ ಒಕ್ಕೂಟದ ಅಧ್ಯಕ್ಷ ಎಂ.ಎಸ್. ಸಂತೋಷಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಣ ಇಲಾಖೆ, ರಾಜ್ಯ ಸರ್ಕಾರ ಪ್ರತಿವರ್ಷ ಮಾನ್ಯತೆ ನವೀಕರಣದ ನಿಯಮಗಳನ್ನು ಜಾರಿಗೆ ತರುವ ಮೂಲಕ ಖಾಸಗಿ ಶಾಲೆಗಳಿಗೆ ಇನ್ನಿಲ್ಲದ ತೊಂದರೆ ನೀಡುತ್ತಿರುವುದು ಮೊದಲು ನಿಲ್ಲಬೇಕು ಎಂದರು.

ಸಹ ಕಾರ್ಯದರ್ಶಿ, ಜಿಪಂ ಮಾಜಿ ಅಧ್ಯಕ್ಷೆ ಸಹನಾ ರವಿ ಮಾತನಾಡಿ, ಸರ್ಕಾರ ನಿಯಮಗಳನ್ನು ಮಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ, ಕೈಗೊಳ್ಳಲು ಆಗದಂತಹ ಕಟ್ಟುಪಾಡಿನ ನಿಯಮಗಳನ್ನು ಹೇರಿದರೆ ಖಾಸಗಿ ಶಾಲೆಗಳು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು? ಸರ್ಕಾರಿ ನಿಯಮಗಳ ಪೂರೈಸದ ಕಾರಣಕ್ಕೆ ಇದುವರೆಗೆ ಯಾವುದೇ ಶಾಲೆಗಳ ಮಾನ್ಯತೆ ನವೀಕರಣಗೊಂಡಿಲ್ಲ. ಸುಮಾರು 2 ಲಕ್ಷಕ್ಕೂ ಅಧಿಕ ಮಕ್ಕಳು ಆತಂಕಗೊಂಡಿದ್ದಾರೆ. ಪಾಲಕರಿಗೆ ಖಾಸಗಿ ಶಾಲೆಗಳು ಉತ್ತರಿಸುವುದೇ ಕಷ್ಟವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂತೋಷ ಕುಮಾರ ಮಾಗಾನಹಳ್ಳಿ ಮಾತನಾಡಿ, ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರಿಂದ ವಿಧಾನ ಪರಿಷತ್ತು ಸದಸ್ಯ ಪುಟ್ಟಣ್ಣ ಅಧ್ಯಕ್ಷತೆಯ ಸದನ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಇನ್ನೊಂದು ವಾರದಲ್ಲೇ ಸಮಿತಿ ವರದಿ ಪಡೆದು, ಮಾನ್ಯತೆ ನವೀಕರಣ ಗೊಂದಲವನ್ನು ಸರ್ಕಾರ ಪರಿಹರಿಸಲಿ ಎಂದು ಆಗ್ರಹಿಸಿದರು.

ಖಜಾಂಚಿ ಎಚ್.ಜೆ. ಮೈನುದ್ದೀನ್ ಮಾತನಾಡಿ, ಸದನ ಸಮಿತಿ ಕೈಗೊಂಡ ಪ್ರಕ್ರಿಯೆಗಳನ್ನು ಖಾಸಗಿ ಶಾಲೆಗಳ ಗಮನಕ್ಕೂ ತರಬೇತು. ಮಾನ್ಯತೆ ನವೀಕರಣಕ್ಕೆ ಕಾಲಾವಕಾಶ ಕಡಿಮೆ ಇದೆ. ಹಿಂದಿನ ವರ್ಷದ ನವೀಕರಣವನ್ನೇ ಈಗ ಮುಂದುವರಿಸಬೇಕು. ನವೀಕರಣ ಸಾಧ್ಯವಾಗದ ಕಾರಣ ಕಳೆದ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯ ಸುಮಾರು ₹200 ಕೋಟಿ ರಾಜ್ಯದ ಖಾಸಗಿ ಶಾಲೆಗಳಿಗೆ ಪಾವತಿಯಾಗಿಲ್ಲ. ಹಾಗಾಗಿ, ಸದನ ಸಮಿತಿ ತ್ವರಿತವಾಗಿ ವರದಿ ನೀಡಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಿದ್ದರೂ ಖಾಸಗಿ ಶಾಲೆಗಳಲ್ಲಿ ಶೇ.25ರಷ್ಟು ಸ್ಥಾನಗಳನ್ನು ಶಿಕ್ಷಣ ಹಕ್ಕು ಕಾಯ್ದೆಯಡಿ ಭರ್ತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು. ಶೇ.25 ಸೀಟುಗಳನ್ನು ನೀಡಲು ಖಾಸಗಿ ಶಾಲೆಗಳೂ ಸಿದ್ಧವಾಗಿವೆ. ಅದಕ್ಕೆ ತಕ್ಕಂತೆ ಕಾಲಕಾಲಕ್ಕೆ ಸರ್ಕಾರವು ಆರ್‌ಟಿಇ ಹಣ‍ ಪಾವತಿಸಲಿ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಸಹ ಕಾರ್ಯದರ್ಶಿ, ಜಿಪಂ ಮಾಜಿ ಅಧ್ಯಕ್ಷೆ ಸಹನಾ ರವಿ, ಬಿ.ಕೆ. ಪೃಥ್ವಿರಾಜ ಬಾದಾಮಿ, ಸೈಯದ್ ಮನಫುಶ್ ಇತರರು ಇದ್ದರು.

- - -

-10ಕೆಡಿವಿಜಿ3.ಜೆಪಿಜಿ:

ದಾವಣಗೆರೆಯಲ್ಲಿ ಮಂಗಳವಾರ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಎಂ.ಎಸ್. ಸಂತೋಷ ಕುಮಾರ, ಸಹ ಕಾರ್ಯದರ್ಶಿ ಸಹನಾ ರವಿ, ಖಜಾಂಚಿ ಎಚ್.ಜೆ. ಮೈನುದ್ದೀನ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಸುರಕ್ಷಿತ ಅಂತರ್ಜಾಲ ಬಳಕೆ ಅತ್ಯಗತ್ಯ: ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎ.ಜಿ.ಕಾರಿಯಪ್ಪ
ಮನೆಯಿಂದಲೇ ನಮೂನೆ-೩ ಪಡೆಯುವ ವ್ಯವಸ್ಥೆ ಜಾರಿ; ದಾಖಲೆಗಳು ಸರಿಯಾಗಿದ್ದರೆ ಇ- ಖಾತೆ ಪಡೆಯಲು ಅವಕಾಶ