ಕನ್ನಡಪ್ರಭ ವಾರ್ತೆ ಬೀದರ್
ಅವರು ಬುಧವಾರ ಬೀದರ್ ತಾಲೂಕು ಪಂಚಾಯತ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಜನ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಕ್ಷಣ ಬಗೆಹರಿಯದ ಕೆಲವು ಸಮಸ್ಯೆಗಳಿಗೆ ಹತ್ತು ದಿನಗಳಲ್ಲಿ ಪರಿಹಾರ ನೀಡಬೇಕು. ಹಾಗೇನಾದರು ಸಮಸ್ಯೆಗಳಿದ್ದರೆ ಅವರಿಗೆ ಹಿಂಬರಹ ನೀಡಿ, ಆದರೆ ಅನಾವಶ್ಯಕವಾಗಿ ಜನರು ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಎಂದರು.
ಮಳೆಗಾಲ ಇರುವುದರಿಂದ ರಸ್ತೆ ಚರಂಡಿಗಳಲ್ಲಿ ನೀರು ನಿಂತು ಜನರಿಗೆ ಸಮಸ್ಯೆಗಳಾಗುತ್ತವೆ, ಹಾಗಾಗಿ ಮುಂಜಾಗ್ರತೆ ವಹಿಸುವಂತೆ ನಗರಸಭೆ ಆಯುಕ್ತರಿಗೆ ಸೂಚನೆ ನೀಡಿದರು. ಜನಸ್ಪಂದನದಲ್ಲಿ ಬಂದ ಒಟ್ಟು 31 ಅರ್ಜಿಗಳಿಗೆ ಪ್ರಥಮ ಆದ್ಯತೆ ನೀಡಬೇಕೆಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ತಮ್ಮ ಕಚೇರಿಗೆ ಜನರು ಬಂದಾಗ ಅವರಿಗೆ ಸರಿಯಾಗಿ ಸ್ಪಂದನೆ ಮಾಡಿ ಅಲ್ಲಿಯೆ ಸಮಸ್ಯೆ ಬಗೆಹರಿಸಿದರೆ ಜನರು ಇಲ್ಲಿಗೆ ಬರುವುದಿಲ್ಲ. ತಾಲೂಕು ಮಟ್ಟದ ಅಧಿಕಾರಿಗಳಿಗೆ ಫಿಲ್ಡ್ ಲೇವಲ್ ಎಲ್ಲಾ ಮಾಹಿತಿ ಗೊತ್ತಿರುತ್ತದೆ. ಜನರಿಗೆ ಸಕಾರಾತ್ಮಕವಾಗಿ ಸ್ಪಂದನೆ ಮಾಡುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದರು.
ಆನ್ಲೈನ್ನಲ್ಲಿ ₹6 ಲಕ್ಷ ಮೋಸ, ನ್ಯಾಯಕ್ಕೆ ಮನವಿ:
ಕಮಲನಗರ ತಾಲೂಕಿನ ಚಿಕ್ಲಿ (ಯು) ಗ್ರಾಮ ಪಂಚಾಯತಿ ಪಿಡಿಒ ವಿಜಯಕುಮಾರ ಧೂಳಪ್ಪ ಇವರ ಮೇಲೆ ಲೋಕಾಯುಕ್ತ ಪ್ರಕರಣ ಬಾಕಿ ಇದ್ದರು ಮುಂಬಡ್ತಿ ನೀಡಲಾಗಿದೆ. ಇದನ್ನು ರದ್ದುಪಡಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಗುಲಾಂ ದಸ್ತಗೀರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜನ ಸ್ಪಂದನ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ ಸಹಾಯಕ ಆಯುಕ್ತರಾದ ಲವೀಶ ಒರಡಿಯಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಬೀದರ ತಾಲ್ಲೂಕು ತಹಶಿಲ್ದಾರ ಡಿ.ಜಿ. ಮಹತ್, ಬೀದರ ತಾ.ಪಂ ಅಧಿಕಾರಿ ಕಿರಣ್ ಪಾಟೀಲ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.