ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಅರ್ಹ ಕುಟುಂಬ ಪಡಿತರದಿಂದ ವಂಚಿತವಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಚಾಮರಾಜನಗರ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ಪಡಿತರ ವಿತರಣಾ ವ್ಯವಸ್ಥೆಯ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಅನೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳಿಗೆ ಪಡಿತರ ವಿತರಿಸಲು ಸಾಧ್ಯವಾಗುತ್ತಿಲ್ಲ. ಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಕಾಯುವ ಬಡವರು, ವೃದ್ಧರು, ಮಹಿಳೆಯರು ಹಾಗೂ ಕೂಲಿ ಕಾರ್ಮಿಕರು ಪಡಿತರ ಪಡೆಯದೆ ಮನೆಗೆ ಹಿಂದಿರುಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.ಕೇಂದ್ರ ಸರ್ಕಾರದ ಪಿಎಂಜಿಕೆಎವೈ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಬಡ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸಲಾಗುತ್ತಿದೆ. ಆದರೆ ತಾಂತ್ರಿಕ ಸಮಸ್ಯೆಯಿಂದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯದಿರುವುದು ಗಂಭೀರ ವಿಚಾರವಾಗಿದೆ. ಸರ್ವರ್ ಸಮಸ್ಯೆ ಸರ್ಕಾರದ ತಾಂತ್ರಿಕ ಲೋಪದಿಂದ ಉಂಟಾಗಿದ್ದರೆ ಅದರ ಹೊರೆ ಬಡ ಫಲಾನುಭವಿಗಳ ಮೇಲೆ ಹಾಕಬಾರದು ಎಂದರು.
ಬಡವರ ಆಹಾರದ ಹಕ್ಕಿನ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು. ಈ ತಿಂಗಳ ಪಡಿತರದಿಂದ ಯಾವುದೇ ಅರ್ಹ ಕುಟುಂಬ ವಂಚಿತವಾಗದಂತೆ ರಾಜ್ಯ, ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.