ಬ್ಯಾಂಕ್‌ಗಳಲ್ಲಿ ರೈತರಿಗೆ ಸರಿಯಾಗಿ ಸ್ಪಂದಿಸಿ

KannadaprabhaNewsNetwork |  
Published : Dec 21, 2024, 01:15 AM IST
ಫೋಟೋ- ಎಸ್‌ಬಿಐ ಬ್ಯಾಂಕ | Kannada Prabha

ಸಾರಾಂಶ

ತ್ರೈಮಾಸಿಕ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಸೂಚನೆ

ಕನ್ನಡಪ್ರಭ ವಾರ್ತೆ ಕಲಬುರಗಿದೇಶಕ್ಕೆ ಅನ್ನ ನೀಡುವ ರೈತ ಕೃಷಿ ಸಾಲ ಕೋರಿ ಬ್ಯಾಂಕಿಗೆ ಬಂದಲ್ಲಿ ಸರಿಯಾಗಿ ಸ್ಪಂದಿಸಿ ತ್ವರಿತಗತಿಯಲ್ಲಿ ಸಾಲ ಮಂಜೂರು ಮಾಡುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕರ್ಸ್ ಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಜಿಲ್ಲಾ ಸಮಾಲೋಚನಾ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (ಡಿಎಲ್ಆರ್‌ಸಿ) ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃಧ್ಧಿಯೇ ಬ್ಯಾಂಕುಗಳ ಪ್ರಮುಖ ಧ್ಯೇಯವಾಗಬೇಕು ಎಂದರು.

ಕೃಷಿ ಸೇರಿದಂತೆ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ವಿಸ್ತೀರ್ಣ ಹೆಚ್ಚಳಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ತೋಟಗಾರಿಕೆ ಸಾಲವನ್ನು ಆದ್ಯತೆ ಮೇಲೆ ಮಂಜೂರು ಮಾಡಬೇಕು. ಬೆಳೆ ಸಾಲ ಬೆಂಬಲಿಸುವ ನಿಟ್ಟಿನಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಅಡಿಯಲ್ಲಿ ಬಾಕಿ ಇರುವ ಕೆಸಿಸಿ ಸಾಲಗಳನ್ನು ಕೂಡಲೆ ರೈತರಿಗೆ ಮಂಜೂರು ಮಾಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರವು ವಿವಿಧ ಜನಪರ ಯೋಜನೆಗಳನ್ನು ವಿವಿಧ ನಿಗಮಗಳಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಆಯಾ ನಿಗಮ ಮತ್ತು ಇಲಾಖೆಗಳಿಂದ ಫಲಾನುಭವಿಗಳಿಗೆ ಸಾಲ, ಸಬ್ಸಿಡಿ ಸಾಲ ಮಂಜೂರು ಮಾಡಲು ಪ್ರಸ್ತಾವನೆ ಬಂದಲ್ಲಿ ಅದನ್ನು ಪ್ರಥಾಮದ್ಯತೆ ಮೇರೆಗೆ ಕಾಲಮಿತಿಯಲ್ಲಿ ಸಾಲ ಮಂಜೂರು ಮಾಡುವ ಮೂಲಕ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಬ್ಯಾಂಕರ್ಸ್ ಗಳು ಕೈಜೋಡಿಸಬೇಕು ಎಂದರು.

ಮಹಿಳಾ ಆರ್ಥಿಕ ಸಬಲೀಕರಣ ನಿಟ್ಟಿನಲ್ಲಿ ಸ್ವ-ಸಹಾಯ ಗುಂಪು (SHG) ಕ್ರೆಡಿಟ್ ಲಿಂಕ್ ಯೋಜನೆ ಸಾಕಾರ ಕುರಿತು ಸಭೆಯಲ್ಲಿ ಒತ್ತಿ ಹೇಳಿದ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು, ಬ್ಯಾಂಕುಗಳಲ್ಲಿ ಬಾಕಿ ಉಳಿದಿರುವ ಮಹಿಳಾ ಸ್ವಸಹಾಯ ಗುಂಪು ಸಾಲ ಕೂಡಲೆ ಮಂಜೂರು ಮಾಡಬೇಕಲ್ಲದೆ ಎಸ್.ಎಚ್.ಜಿ. ಯೋಜನೆಗಳನ್ನು ಎಲ್ಲಾ ಬ್ಯಾಂಕ್‌ಗಳು ಜಾರಿಗೊಳಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಬೆಂಗಳೂರಿನ ಭಾರತೀಯ ರಿಸರ್ವ್ ಬ್ಯಾಂಕ್ ಎಫ್.ಐ.ಡಿ.ಡಿ.ಯ ಎಜಿಎಂ-ಎಲ್‌ಡಿಒ ಬುಬುಲ್, ನಬಾರ್ಡ್ ಬ್ಯಾಂಕಿನ ಡಿ.ಡಿ.ಎಂ ಲೋಹಿತ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಕುಮಾರ್ ಪಾಟೀಲ್ ಸೇರಿದಂತೆ ವಿವಿಧ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರೆ ಪಾಲುದಾರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವರಾತ್ರಿ ಪ್ರಯುಕ್ತ ಕಾಶಿಪುರ ಉತ್ಸವ ಭವ್ಯ ಆಚರಣೆ
ಚಾಮರಾಜನಗರ: ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ