ಅಹವಾಲುಗಳಿಗೆ ಶೀಘ್ರ ಸ್ಪಂದಿಸಿ

KannadaprabhaNewsNetwork |  
Published : Jun 29, 2024, 12:37 AM IST
ಪೊಟೋ ಜೂ.25ಎಂಡಿಎಲ್ 2ಎ, 2ಬಿ, 2ಸಿ. ಮುಧೋಳ ತಹಸೀಲ್ದಾರ ಕಚೇರಿಯಲ್ಲಿ ಮಂಗಳವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಸಾರ್ವಜನಿಕರ ಅಹವಾಲುಗಳನ್ನು ಸ್ವಿಕರಿಸಿದರು. | Kannada Prabha

ಸಾರಾಂಶ

ಮುಧೋಳ ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಜರುಗಿತು.

ಮುಧೋಳ: ತಾಲೂಕಿನಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳು ಮತ್ತು ಬೇಡಿಕೆಗಳಿದ್ದು, ಸಾರ್ವಜನಿಕರು ಆಯಾ ಇಲಾಖೆಗಳ ಮೂಲಕ ತಮ್ಮ ಅಹವಾಲು ಸಲ್ಲಿಸಿದ್ದಾರೆ, ಈ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿರುವ ಸಮಸ್ಯೆಗಳಿಗೆ ತುರ್ತು ಪರಿಹಾರ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು. ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕು ಆಡಳಿತ, ತಾಪಂ ಹಾಗೂ ತಾಲೂಕು ಮಟ್ಟದ ಇಲಾಖೆಗಳ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಮುಧೋಳ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿ.ಪಂ ಸಿಇಒ ಶಶಿಧರ ಕುರೇರ, ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಸೀಲ್ದಾರ್‌ ವಿನೋದ ಹತ್ತಳ್ಳಿ, ತಾ.ಪಂ ಇಒ ಸಂಜೀವ ಹಿಪ್ಪರಗಿ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!