ಕನ್ನಡಪ್ರಭ ವಾರ್ತೆ ಕಿಕ್ಕೇರಿ
ನನ್ನ ಅವಧಿಯಲ್ಲಿ ನೊಂದವರ, ದುರ್ಬಲರ ಸಮಸ್ಯೆಗೆ ಮೊದಲ ಆದ್ಯತೆ ನೀಡುತ್ತೇನೆ. ಇಂದಿನ ಸಭೆಯಲ್ಲಿ 24 ಅರ್ಜಿಗಳು ಬಂದಿದ್ದು, ಒಂದು ವಾರದೊಳಗೆ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳನ್ನು ತಿಳಿಸಬೇಕು ಎಂದು ಸೂಚಿಸಿದರು.
ನಾನು ಕಿಕ್ಕೇರಿ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಅಭಿಮಾನಿಯಾಗಿರುವೆ. ಕೆ.ಎಸ್.ನರಸಿಂಹಸ್ವಾಮಿ ಸಮುದಾಯ ಭವನ ತ್ವರಿತವಾಗಿ ಸಾರ್ವಜನಿಕರ ಕಾರ್ಯಕ್ರಮಗಳಿಗೆ ಅನುಕೂಲವಾಗಲು ವ್ಯವಸ್ಥೆ ಮಾಡಲು ತಾಪಂ ಇಒ ಕ್ರಮ ವಹಿಸಬೇಕು ಎಂದರು.ಕಿಕ್ಕೇರಿಯಲ್ಲಿ ರಾಜ್ಯ ಹೆದ್ದಾರಿ ಬಳಿ ತ್ಯಾಜ್ಯ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗ ಕಾಡುವ ಜೊತೆಗೆ ನಾಯಿಗಳ ಕಾಟ ವಿಪರೀತವಾಗಿದೆ. ಗೂಬೆಗುಡ್ಡದ ಬಳಿ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಿಕೊಡಬೇಕು ಎಂದು ಸಾರ್ವಜನಿಕರು ದೂರಿದರು.
ಆಶ್ರಯ ಯೋಜನೆಯಡಿ ಅರ್ಜಿ ಸಲ್ಲಿಸಿರುವವರಿಗೆ ನಿವೇಶನ ನೀಡಬೇಕು. ಮನೆ ಹಂಚಿಕೆಯಾಗಿದೆ. ಆದರೆ, ಹಕ್ಕುಪತ್ರ ನೀಡಿಲ್ಲ. ಕೊಟ್ಟಿಗೆ ಹಾಗೂ ಶೌಚಾಲಯ ನಿರ್ಮಿಸಿಕೊಂಡಿದ್ದು, ಇದುವರೆಗೂ ಹಣ ಬಿಡುಗಡೆಯಾಗಿಲ್ಲ. ಐಕನಹಳ್ಳಿಯಲ್ಲಿ ರಸ್ತೆಯ ಡ್ರೈನ್ಗಳ ತೆರದಿವೆ. ಮುಚ್ಚಿಸಿ, ಊಗಿನಹಳ್ಳಿ ಗ್ರಾಮದಲ್ಲಿ ಗಿಡ ನೆಡದೆ ನರೇಗಾ ಯೋಜನೆಯಲ್ಲಿ ಬಿಲ್ ಮಾಡಿಕೊಳ್ಳಲಾಗಿದೆ ಎಂದು ದೂರುಗಳ ಸರಮಾಲೆಯನ್ನು ಸಾರ್ವಜನಿಕರು ಅಲವತ್ತುಕೊಂಡರು.
ಈ ವೇಳೆ ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಿ, ಸಹಾಯಕ ಸಾಂಖ್ಯಿಕ ಅಧಿಕಾರಿ ಅನಿತಾ, ತಾಪಂ ಇಒ ಸುಷ್ಮಾ, ಹೋಬಳಿಯ 7 ಗ್ರಾಪಂಗಳ ಅಧ್ಯಕ್ಷರು, ಸದಸ್ಯರು, ಪಿಡಿಒ, ತಾಪಂ, ಪಂಚಾಯಿತಿ ಅಧಿಕಾರಿಗಳು ಇದ್ದರು.