ಪೌರಕಾರ್ಮಿಕರ ಕಾಯಂ ಮಾಡಲು ಗಮನ ಸೆಳೆದಿದ್ದಕ್ಕೆ ಸ್ಪಂದನೆ

KannadaprabhaNewsNetwork |  
Published : Sep 24, 2025, 01:00 AM IST
ಸದನದಲ್ಲಿ ನನ್ನ ಪ್ರಶ್ನೆಯಿಂದ ರಾಜ್ಯದ ೨೧೨೭ ಪೌರ ಕಾರ್ಮಿಕರಿಗೆ ಅನುಕೂಲ- ಎಆರ್‌ಕೆಯಳಂದೂರು:ನಾನು ಸದನದಲ್ಲಿ ಕೊಳ್ಳೇಗಾಲ ನಗರ ಸಭೆಯಲ್ಲಿ ಕೆಲ ಪೌರ ಕಾರ್ಮಿಕರನ್ನು ಖಾಯಂ ಮಾಡಿ ಅವರಿಗೆ ನೇರ ನೇಮಕಾತಿಗೆ ಅನುಮತಿ ನೀಡಬೇಕೆಂದು ಪ್ರಶ್ನಿಸಿದ್ದೆ. ಸರ್ಕಾರ ಸ್ಪಂಧಿಸಿ ಇಂದು ರಾಜ್ಯದ ಎಲ್ಲಾ ನಗರ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಕೆಯೂ ಸೇರಿದಂತೆ ೨೧೨೭ ಮಂದಿಗೆ ನೇರ ನೇಮಕಾತಿಗೆ ಆದೇಶ ನೀಡಿದ್ದು ಇದರಿಂದ ಈ ಪೌರ ಕಾರ್ಮಿಕರಿಗೆ ಅನುಕೂಲವಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.ಅವರು ಮಂಗಳವಾರ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಂಬಂಪಟ್ಟ ಮಂತ್ರಿಗಳಾದ ರಹೀಂಖಾನ್, ಹಾಗೂ ಭೈರತಿ ಸುರೇಶ್‌ರವರು ಇದನ್ನು ಪರಿಗಣಿಸಿ ಪೌರಾಡಳಿತ ನಿರ್ದೇಶನಾಲಯದ ಮೂಲಕ ಆದೇಶ ನೀಡಿದ್ದಾರೆ. ಇದರಿಂದ ನನ್ನ ಕ್ಷೇತ್ರದ ಕೊಳ್ಳೇಗಾಲ ನಗರ ಸಭೆಯ೨೪ ಮಂದಿ ಹಾಗೂ ಯಳಂದೂರು ಪಟ್ಟಣ ಪಂಚಾಯಿತಿಯ ೩ ಮಂದಿ ಸೇರಿದಂತೆ ನಗರ, ಪುರಸಭೆ, ಪಟ್ಟಣ ಪಂಚಾಯಿತಿಗಳ ೧೧೦೦ ಮಂದಿ, ಮಹಾನಗರ ಪಾಲಿಕೆಯ ೩೨೭ ಮಂದಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೭೦೦ ಮಂದಿ ಪೌರ ಕಾರ್ಮಿಕರಿಗೆ ಅನುಕೂಲವಾಗಿದೆ.  ನಮ್ಮ ಗ್ರಾಮ, ಪಟ್ಟಣ, ನಗರ, ರಾಜ್ಯ ದೇಶ ಸ್ವಚ್ಚವಾಗಿಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಇದು ನನಸಾಗಲು ಪೌರ ಕಾರ್ಮಿಕರು ದಿನನಿತ್ಯ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾರೆ. ಪೌರ ಕಾರ್ಮಿಕರು ಸ್ವಚ್ಚತೆಯ ಸೈನಿಕರು ಇವರಿಲ್ಲದೆ ಸ್ವಚ್ಚತೆ ಇರದು, ಆದರೆ ಇವರೊಂದಿಗೆ ಪ್ರತಿ ನಾಗಕರೀಕರು ಕಸವನ್ನು ಸೂಕ್ತವಾಗಿ ವಿಲೇವಾರಿ ಮಾಡಿ, ಇದನ್ನು ಒಣ ಹಾಗೂ ಹಸಿಯಾಗಿ ಬೇರ್ಪಡಿಸಿ, ಎಲ್ಲೆಂದರಲ್ಲಿ ಕಸವನ್ನು ಬೀಸಾಡದೆ ಸಂಬಂಧಪಟ್ಟ ವಾಹನಕ್ಕೆ ನೀಡುವ ಮೂಲಕ ಪೌರ ಕಾರ್ಮಿಕರಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ವಿಶೇಷ ಭತ್ಯೆಯನ್ನು ನೀಡಿ ಅವರಿಗೆ ಪೇಟ ತೊಡಿಸಿ ಫಲತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಪಪಂ ಅಧ್ಯಕ್ಷೆ ಲಕ್ಷ್ಮಿಮಲ್ಲು ಉಪಾಧ್ಯಕ್ಷೆ ಶಾಂತಮ್ಮ ನಿಂಗರಾಜು ಸದಸ್ಯರಾದ ಮಹೇಶ್, ವೈ.ಜಿ. ರಂಗನಾಥ, ಸವಿತಾ ಬಸವರಾಜು, ಮಹದೇವ, ಮಂಜು, ಪ್ರಭಾವತಿರಾಜಶೇಖರ್, ಬಿ. ರವಿ, ಸುಶೀಲಾಪ್ರಕಾಶ್ ನಾಮನಿರ್ದೇಶಿತ ಸದಸ್ಯರಾದ ಲಿಂಗರಾಜಮೂರ್ತಿ, ಶ್ರೀಕಂಠಸ್ವಾಮಿ, ಮುನವ್ವರ್‌ಬೇಗ್ ಮುಖ್ಯಾಧಿಕಾರಿ ಎಂ.ಪಿ. ಮಹೇಶ್‌ಕುಮಾರ್ ಆರೋಗ್ಯ ನಿರೀಕ್ಷಕ ರಘು, ಗುತ್ತಿಗೆದಾರ ರಮೇಶ್, ಮಲ್ಲಿಕಾರ್ಜುನ, ರಘು ಸೇರಿದಂತೆ ಅನೇಕರು ಇದ್ದರು.೨೩ವೈಎಲ್‌ಡಿ ಚಿತ್ರ೦೧ ಯಳಂದೂರು ಪಟ್ಟಣ ಪಂಚಾಯಿತಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಸನ್ಮಾನಿಸಿದರು. ಅಧ್ಯಕ್ಷೆ ಲಕ್ಷ್ಮಿ, ಉಪಾಧ್ಯಕ್ಷೆ ಶಾಂತಮ್ಮ ಇದ್ದರು.  | Kannada Prabha

ಸಾರಾಂಶ

ನಾನು ಸದನದಲ್ಲಿ ಕೊಳ್ಳೇಗಾಲ ನಗರ ಸಭೆಯಲ್ಲಿ ಕೆಲ ಪೌರ ಕಾರ್ಮಿಕರನ್ನು ಕಾಯಂ ಮಾಡಿ ಅವರಿಗೆ ನೇರ ನೇಮಕಾತಿಗೆ ಅನುಮತಿ ನೀಡಬೇಕೆಂದು ಪ್ರಶ್ನಿಸಿದ್ದೆ. ಸರ್ಕಾರ ಸ್ಪಂದಿಸಿ ರಾಜ್ಯದ ಎಲ್ಲಾ ನಗರ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಕೆಯೂ ಸೇರಿದಂತೆ ೨೧೨೭ ಮಂದಿಗೆ ನೇರ ನೇಮಕಾತಿಗೆ ಆದೇಶ ನೀಡಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ, ಯಳಂದೂರುನಾನು ಸದನದಲ್ಲಿ ಕೊಳ್ಳೇಗಾಲ ನಗರ ಸಭೆಯಲ್ಲಿ ಕೆಲ ಪೌರ ಕಾರ್ಮಿಕರನ್ನು ಕಾಯಂ ಮಾಡಿ ಅವರಿಗೆ ನೇರ ನೇಮಕಾತಿಗೆ ಅನುಮತಿ ನೀಡಬೇಕೆಂದು ಪ್ರಶ್ನಿಸಿದ್ದೆ. ಸರ್ಕಾರ ಸ್ಪಂದಿಸಿ ರಾಜ್ಯದ ಎಲ್ಲಾ ನಗರ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಕೆಯೂ ಸೇರಿದಂತೆ ೨೧೨೭ ಮಂದಿಗೆ ನೇರ ನೇಮಕಾತಿಗೆ ಆದೇಶ ನೀಡಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾಹಿತಿ ನೀಡಿದರು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರಾದ ರಹೀಂಖಾನ್, ಹಾಗೂ ಭೈರತಿ ಸುರೇಶ್‌ರವರು ಇದನ್ನು ಪರಿಗಣಿಸಿ ಪೌರಾಡಳಿತ ನಿರ್ದೇಶನಾಲಯದ ಮೂಲಕ ಆದೇಶ ನೀಡಿದ್ದಾರೆ. ಇದರಿಂದ ನನ್ನ ಕ್ಷೇತ್ರದ ಕೊಳ್ಳೇಗಾಲ ನಗರ ಸಭೆಯ ೨೪ ಮಂದಿ ಹಾಗೂ ಯಳಂದೂರು ಪಟ್ಟಣ ಪಂಚಾಯಿತಿಯ ೩ ಮಂದಿ ಸೇರಿದಂತೆ ನಗರ, ಪುರಸಭೆ, ಪಟ್ಟಣ ಪಂಚಾಯಿತಿಗಳ ೧೧೦೦ ಮಂದಿ, ಮಹಾನಗರ ಪಾಲಿಕೆಯ ೩೨೭ ಮಂದಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೭೦೦ ಮಂದಿ ಪೌರ ಕಾರ್ಮಿಕರಿಗೆ ಅನುಕೂಲವಾಗಿದೆ.

ನಮ್ಮ ಗ್ರಾಮ, ಪಟ್ಟಣ, ನಗರ, ರಾಜ್ಯ ದೇಶ ಸ್ವಚ್ಛವಾಗಿಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಇದು ನನಸಾಗಲು ಪೌರ ಕಾರ್ಮಿಕರು ದಿನನಿತ್ಯ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾರೆ. ಪೌರ ಕಾರ್ಮಿಕರು ಸ್ವಚ್ಛತೆಯ ಸೈನಿಕರು. ಇವರೊಂದಿಗೆ ಪ್ರತಿ ನಾಗಕರಿಕರು ಕಸವನ್ನು ಸೂಕ್ತವಾಗಿ ವಿಲೇವಾರಿ ಮಾಡಿ, ಇದನ್ನು ಒಣ ಹಾಗೂ ಹಸಿಯಾಗಿ ಬೇರ್ಪಡಿಸಿ, ಎಲ್ಲೆಂದರಲ್ಲಿ ಕಸವನ್ನು ಬೀಸಾಡದೆ ಸಂಬಂಧಪಟ್ಟ ವಾಹನಕ್ಕೆ ನೀಡುವ ಮೂಲಕ ಪೌರ ಕಾರ್ಮಿಕರಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿದರು. ಪೌರ ಕಾರ್ಮಿಕರಿಗೆ ವಿಶೇಷ ಭತ್ಯೆಯನ್ನು ನೀಡಿ ಅವರಿಗೆ ಪೇಟ ತೊಡಿಸಿ ಫಲತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಪಪಂ ಅಧ್ಯಕ್ಷೆ ಲಕ್ಷ್ಮಿಮಲ್ಲು ಉಪಾಧ್ಯಕ್ಷೆ ಶಾಂತಮ್ಮ ನಿಂಗರಾಜು ಸದಸ್ಯರಾದ ಮಹೇಶ್, ವೈ.ಜಿ. ರಂಗನಾಥ, ಸವಿತಾ ಬಸವರಾಜು, ಮಹದೇವ, ಮಂಜು, ಪ್ರಭಾವತಿರಾಜಶೇಖರ್, ಬಿ. ರವಿ, ಸುಶೀಲಾಪ್ರಕಾಶ್ ನಾಮನಿರ್ದೇಶಿತ ಸದಸ್ಯರಾದ ಲಿಂಗರಾಜಮೂರ್ತಿ, ಶ್ರೀಕಂಠಸ್ವಾಮಿ, ಮುನವ್ವರ್‌ಬೇಗ್ ಮುಖ್ಯಾಧಿಕಾರಿ ಎಂ.ಪಿ. ಮಹೇಶ್‌ಕುಮಾರ್ ಆರೋಗ್ಯ ನಿರೀಕ್ಷಕ ರಘು, ಗುತ್ತಿಗೆದಾರ ರಮೇಶ್, ಮಲ್ಲಿಕಾರ್ಜುನ, ರಘು ಸೇರಿದಂತೆ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ