ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ಮತ್ತು ಚಾಮರಾಜಗನರ ಜಿಲ್ಲೆಗಳ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕ್ರಿಮಿನಾಶಕ ಮಾರಾಟಗಾರರ ಸಂಘವು ಬುಧವಾರ ಜಯನಗರದ ಶ್ರೀಧಾಮ ಹಾಲ್ನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾರ್ಷಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಹೊಸ ಕೀಟನಾಶಕ, ರಸಗೊಬ್ಬರವನ್ನು ಯಾವ ಪ್ರಮಾಣದಲ್ಲಿ ಬಳಸಬೇಕು ಎಂಬುದನ್ನು ಮೊದಲು ಮಾರಾಟಗಾರರು ಅರಿತು ಕೃಷಿಕರಿಗೆ ತಿಳಿಹೇಳಬೇಕು. ಮಾರುಕಟ್ಟೆಗೆ ಬಂದ ಹೊಸ ತಂತ್ರಜ್ಞಾನ ಬಗ್ಗೆ ಇಲಾಖೆಯಿಂದ ಮಾಹಿತಿ ಪಡೆಯಬೇಕು. ಮಾರುಕಟ್ಟೆಗೆ ಬರುವ ಕೀಟನಾಶಕಗಳನ್ನು ಶಿಫಾರಸು ಮಾಡುವ ಅಧಿಕಾರ ಅಧಿಕಾರಿಗಳಿಗೆ ಇಲ್ಲ. ಮಾರಾಟಗಾರರು ಶಿಫಾರಸು ಮಾಡುವ ಉತ್ಪನ್ನಗಳನ್ನು ರೈತರು ಬಳಸುತ್ತಾರೆ ಎಂದರು.ನಂತರ ಕೀಟನಾಶಕಗಳ ಪ್ರಯೋಜನಗಳ ಕುರಿತು ಸಲಹೆ ಪಡೆಯಬೇಕು. ಆ ಮೂಲಕ ಉತ್ಪನ್ನದ ಮೌಲ್ಯಮಾಪನ ಮಾಡಬೇಕು. ಯಶಸ್ವಿ ರೈತರನ್ನು ಮಾತನಾಡಿಸಬೇಕು ಎಂದರು.
ಚಾಮರಾಜನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಡಾ.ಎಸ್.ಎಸ್. ಆಬೀದ್, ಮೈಸೂರು ವಿಭಾಗದ ಜಾಗೃತ ಕೋಶದ ಜಂಟಿ ಕೃಷಿ ನಿರ್ದೇಶಕ ಡಾ.ಕೆ. ಮಧುಸೂದನ್ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.