ಕನ್ನಡಪ್ರಭ ವಾರ್ತೆ ಬೆಳಗಾವಿ
ಈ ಕುರಿತು ಹೇಳಿಕೆ ನೀಡಿರುವ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಜನರು ನಮ್ಮ ಜನಪರ ಆಡಳಿತವನ್ನು ಸ್ವೀಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ. ಇದು ಕೇವಲ ರಾಜಕೀಯ ಗೆಲುವಲ್ಲ, ಜನ ವಿಶ್ವಾಸದ ಗೆಲುವಾಗಿದೆ ಎಂದಿದ್ದಾರೆ.
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆಮನೆಗೂ ತಲುಪಿ, ಮಹಿಳೆಯರು, ಯುವಕರು, ಬಡವರು, ರೈತರು ಸೇರಿದಂತೆ ಪ್ರತಿಯೊಂದು ವರ್ಗದ ಜನರಿಗೆ ಸಹಾಯವಾಗಿವೆ. ಇದೇ ಕಾರಣಕ್ಕೆ ಜನರು ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ.ಬಿಜೆಪಿಯ ವಿರುದ್ಧ ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ. ಸುಳ್ಳು ಪ್ರಚಾರ ಮತ್ತು ಜನವಿರೋಧಿ ನೀತಿಗಳಿಗೆ ಕರ್ನಾಟಕದ ಜನರು ತಕ್ಕ ಉತ್ತರ ನೀಡಿದ್ದಾರೆ. ಇದು ನಮ್ಮ ಸರ್ಕಾರದ ಕೆಲಸಕ್ಕೆ ಸಿಕ್ಕಿರುವ ಜನರ ಸರ್ಟಿಫಿಕೇಟ್. ಮುಂದೆಯೂ ಇದೇ ರೀತಿಯಾಗಿ ಜನಪರ ಯೋಜನೆಗಳನ್ನು ಇನ್ನಷ್ಟು ಬಲಪಡಿಸಿ, ಜನರ ವಿಶ್ವಾಸವನ್ನು ಉಳಿಸಿಕೊಂಡು ಸಾಗುವುದು ನಮ್ಮ ಬದ್ಧತೆ ಎಂದು ತಿಳಿಸಿದ್ದಾರೆ.