ಕೊಪ್ಪಳ: ನಗರಸಭೆ ಆವರಣದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತ ರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಬಲ್ಡೋಟ ಹಟಾವೋ 20 ಕಾರ್ಖಾನೆ ಬಾಧಿತ ಹಳ್ಳಿಯ 50 ಸಾವಿರ ಜನರ ಜೀವ,ಆರೋಗ್ಯ ಉಳಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಿ, ತುಂಗಭದ್ರಾ ನದಿ ನೀರು ವಿಷಗೊಳಿಸಿದ ಕಾರ್ಖಾನೆ ಮುಚ್ಚಲು ಆಗ್ರಹಿಸಿ ನಡೆದ 141ನೇ ದಿನದ ಧರಣಿ ಪೂರ್ಣಗೊಳಿಸಿತು.
ಇದುವರೆಗೆ ಇಲ್ಲಿನ ಕಾರ್ಖಾನೆಗಳು ಮಾಡಿರುವ ಕೃಷಿ ನಾಶಕ್ಕೆ ಅಷ್ಟು ವರ್ಷಗಳ ಪರಿಹಾರ ಕೊಡಬೇಕು. ರೈತರು ಒಂದಾದರೆ ಎಲ್ಲರೂ ಶ್ರೀಮಂತರಾಗುತ್ತೀರಿ, ಆ ಕಾರ್ಖಾನೆ ಕೊಡುವ ಅತ್ಯಂತ ಕಡಿಮೆ ಸಂಬಳದ ಕೆಲಸ ಯಾವುದಕ್ಕೂ ಬರುವದಿಲ್ಲ,ಅದರ ಬದಲಾಗಿ ಭೂಮಿ ಸಿಕ್ಕರೆ ಇವತ್ತಿನ ಮಾರುಕಟ್ಟೆ ಬೆಲೆ ಕೋಟ್ಯಂತರ ಆಗುತ್ತದೆ ಎಂದರು.
ವೇದಿಕೆಯ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿದರು.ಧರಣಿಯಲ್ಲಿ ಸಂಚಾಲಕ ಮಲ್ಲಿಕಾರ್ಜುನ ಬಿ.ಗೋನಾಳ, ನಿವೃತ್ತ ಪ್ರಾಚಾರ್ಯ ಎಸ್.ಬಿ.ರಾಜೂರು, ಬಿ.ಜಿ.ಕರಿಗಾರ, ಡಾ.ಬಸವರಾಜ ಪೂಜಾರ, ನಿವೃತ್ತ ನ್ಯಾಯಾಂಗ ಅಧಿಕಾರಿ ಜಿ.ಬಿ.ಪಾಟೀಲ್, ನಿವೃತ್ತ ಉಪನ್ಯಾಸಕ ಶಂಭುಲಿಂಗಪ್ಪ ಹರಗೇರಿ, ಶರಣು ಶೆಟ್ಟರ್, ನಟರಾಜ ಸವಡಿ, ಡಿ.ಎಂ.ಬಡಿಗೇರ, ಚನ್ನವೀರಯ್ಯ ಹಿರೇಮಠ, ಯಮನೂರಪ್ಪ ಹಾಳಕೇರಿ, ಹುಲಗೇಶ ಭೋವಿ, ಭೀಮಪ್ಪ ಯಲಬುರ್ಗಿ, ಮಲ್ಲಪ್ಪ ಮಾದಿನೂರ, ರಾಜಶೇಖರ ಏಳುಬಾವಿ, ಮಹಾದೇವಪ್ಪ ಮಾವಿನಮಡು, ಮಕ್ಬುಲ್ ರಾಯಚೂರು, ವಿಜಯಮಹಾಂತೇಶ ಹಟ್ಟಿ, ರೇವಣಸಿದ್ದಯ್ಯ ಚಿತ್ರಗಾರ, ನಾಗರಾಜ ಕುಷ್ಟಗಿ, ವಿನಯ್ ಸಜ್ಜನ್, ಶಿವಾನಂದಯ್ಯ ಬೀಳಗಿಮಠ, ಶಿವಪ್ಪ ಜಲ್ಲಿ, ಸುಭಾನಸಾಬ್ ನೀರಲಗಿ, ಗಂಗಾಧರ ಕಾನಾಪೂರ, ವೈ. ಸತ್ಯನಾರಾಯಣ, ಪಂಪಣ್ಣ ಚಿಂತಪಲ್ಲಿ ಇತರರು ಪಾಲ್ಗೊಂಡಿದ್ದರು.