ಕನ್ನಡಪ್ರಭ ವಾರ್ತೆ ಪೀಣ್ಯ ದಾಸರಹಳ್ಳಿ
ಸೂರಜ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಗೆ ಶಾಸಕ ಎಸ್.ಮುನಿರಾಜು ಅವರು ಪುಸ್ತಕ ಮತ್ತು ಸಮವಸ್ತ್ರಕ್ಕೆ 25 ಸಾವಿರ ನಗದು ನೀಡಿ, ಸಿಹಿ ತಿನಿಸಿ ಅಭಿನಂದಿಸಿದರು.
ಬಳಿಕ ಮಾತನಾಡಿದ ಶಾಸಕ ಎಸ್.ಮುನಿರಾಜು, ರಾಜ್ಯಕ್ಕೆ ಹೆಸರು ತಂದಿರುವ ಈ ವಿದ್ಯಾರ್ಥಿನಿಯ ಪಿಯುಸಿಗೆ ಬೇಕಾದ ಪುಸ್ತಕ ಸಮವಸ್ತ್ರಗಳಿಗೆ ಪ್ರತಿ ವರ್ಷ ವಿದ್ಯಾಭ್ಯಾಸಕ್ಕೆ ಸೂರಜ್ ಫೌಂಡೇಶನ್ ಸಂಸ್ಥಾಪಕಿ ಸುಜಾತ ಮುನಿರಾಜು ಅವರಿಂದ 25 ಸಾವಿರ ನಗದು ಹಣ ನೀಡುತ್ತಾರೆ ಎಂದರು.ಅಷ್ಟೇ ಅಲ್ಲದೆ, ನಮ್ಮ ಸ್ನೇಹಿತರಿಗೂ ತಿಳಿಸಿ ಆ ಮಗುವಿನ ಮುಂದಿನ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದೇವೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಕೂಡ ಬರೆದಿದ್ದೇನೆ ಎಂದು ತಿಳಿಸಿದರಲ್ಲದೆ, ವಿದ್ಯಾರ್ಥಿನಿಗೆ ಎನ್.ಪ್ಲಸ್ ಅಕಾಡೆಮಿ ಕಾಲೇಜಿಗೆ ಪ್ರವೇಶಾತಿ ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ.
ಬಿ.ಎನ್.ಆರ್. ಶಾಲೆಯ ಪ್ರಾಶುಂಪಾಲ ಭೂಷಣ್ ಎನ್. ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲ ಬಿಜೆಪಿಯ ಅಧ್ಯಕ್ಷ ಸೋಮಶೇಖರ್, ಮುಖಂಡ ಗುರುಪ್ರಸಾದ್, ಪಾಂಡು ಇನ್ನೂ ಮುಂತಾದವರು ಉಪಸ್ಥಿತರಿದ್ದರು.