ದೇವನಹಳ್ಳಿ: ತಾಲೂಕಿನ ಅರದೇಶನಹಳ್ಳಿಯ ವೀರಶೈವ ಲಿಂಗಾಯತ ಸ್ಮಶಾನ ಜಾಗ ಹಿಂದಿನ ಕಾಲದಿಂದಲೂ ನೀರಿನ ಮೂಲವಾಗಿದ್ದು, ಇಲ್ಲಿ ಶವಸಂಸ್ಕಾರ ಮಾಡಬಾರದೆಂದು ಕಂದಾಯ ಇಲಾಖೆ ಅಧಿಕಾರಿಗಳು ಅಂತ್ಯಕ್ರಿಯೆಗೆ ಅವಕಾಶ ನೀಡದ ಕಾರಣ ಗ್ರಾಮಸ್ಥರು ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ ನಡೆಸಿ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.
ವರ್ಷಗಳ ಕಾಲ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಶವಸಂಸ್ಕಾರ ತಡೆಯುವುದು ಈಗ ಏಕಾಏಕಿ ಸರಿಯಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ನಂತರ ಘಟನೆಯಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಮಾತುಕತೆ ಮೂಲಕ ಸಂಜೆ ವೇಳೆಗೆ ಅದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಯಿತು.
ಗ್ರಾಮದ ಹೊರವಲಯದಲ್ಲಿರುವ ಸಿದ್ದಯ್ಯನಕುಂಟೆಯಲ್ಲಿ ಕಳೆದ 30 ವರ್ಷಗಳಿಂದ ವೀರಶೈವ ಸಮುದಾಯದವರು ಅಂತ್ಯಕ್ರಿಯೆ ನಡೆಸುತ್ತಿದ್ದರು. ಗ್ರಾಮಸ್ಥರೇ ಈ ಸ್ಥಳವನ್ನು ವೀರಶೈವ ಲಿಂಗಾಯತ ಸಮುದಾಯಕ್ಕೆ ನೀಡಿದ್ದಾರೆ. ಈಗಾಗಲೇ 30ಕ್ಕೂ ಹೆಚ್ಚು ಶವಗಳ ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಈಗ ಏಕಾಏಕಿ, ಆ ಜಾಗ ಸರ್ಕಾರಕ್ಕೆ ಸೇರಿದ್ದು, ನೀರಿನ ಮೂಲ, ಅಲ್ಲಿ ಅಂತ್ರಕ್ರಿಯೆ ನಡೆಸುತ್ತಿರುವುದರಿಂದ ಗ್ರಾಮಸ್ಥರಿಗೆ ತೊಂದರೆ ಆಗಿದೆ ಎಂದು ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿರುವುದು ಸರಿಯಲ್ಲ ಎಂದು ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.ರಾಜಕೀಯ ದ್ವೇಷ:
ಈ ವೇಳೆ ಗ್ರಾಮದ ವೀರಶೈವ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ಎಂ.ಎಸ್ ರಮೇಶ್, ಖಜಾಂಚಿ ಎಸ್. ನಾಗೇಶ್, ರಾಜ್ಯ ಸಮಿತಿ ಸದಸ್ಯ ವಿರೂಪಾಕ್ಷ, ಮುಖಂಡರಾದ ನಾಗೇಶ್, ಸತೀಶ್, ಮಣಿ, ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಮಂಜುನಾಥ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹನುಮಂತರಾಯಪ್ಪ ಮತ್ತು ಸಿಬಂದ ವರ್ಗ ಇದ್ದರು.
ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಗ್ರಾಮದ ವೀರಶೈವ ಲಿಂಗಾಯತ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ.