ಕನ್ನಡಪ್ರಭವಾರ್ತೆ, ಚಿತ್ರದುರ್ಗ
ಬರ ಪರಿಸ್ಥಿತಿ ನಿರ್ವಹಣೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು, ಬಾಕಿ ಬೆಳೆಹಾನಿ ಪರಿಹಾರ ವಿತರಣೆ, ಮುಂಗಾರು-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಗಳಲ್ಲಿ ಕೈಗೊಂಡಿರುವ ಪೂರ್ವಸಿದ್ಧತೆ ಹಾಗೂ ಗುಡುಗು ಸಿಡಿಲು, ಮಳೆ ಮತ್ತು ಇತರೆ ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿಯನ್ನು ತಡೆಯಲು ಕೈಗೊಂಡ ಕ್ರಮಗಳು ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಸೇರಿದಂತೆ ತಹಸೀಲ್ದಾರ್ ಅಧಿಕಾರರಿಗಳು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರರು, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.