ಗೃಹಲಕ್ಷ್ಮೀ ಫಲಾನುಭವಿಗಳ ಪರಿಷ್ಕರಣೆ ಮಾಡಿ

KannadaprabhaNewsNetwork |  
Published : Jul 25, 2026, 01:30 AM IST
೨೪ಶಿರಾ೨: ಶಿರಾ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಗ್ಯಾರಂಟಿ  ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ಆರ್.ನಾಗರಾಜು, ತಾ.ಪಂ. ಇಓ ಹರೀಶ್ ಆರ್ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಜನಸಾಮನ್ಯರು ಸೈಬರ್ ಸೆಂಟರ್ ಗಳಿಗೆ ಅಲೆಯದಂತೆ ಸಂಬಂಧಿಸಿದ ಸಿಬ್ಬಂದಿ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಅಗತ್ಯ ಮೂಲದಾಖಲಾತಿಗಳನ್ನು ಪಡೆದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುವಂತೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಆರ್.ನಾಗರಾಜು ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿರಾ

ಜನಸಾಮನ್ಯರು ಸೈಬರ್ ಸೆಂಟರ್ ಗಳಿಗೆ ಅಲೆಯದಂತೆ ಸಂಬಂಧಿಸಿದ ಸಿಬ್ಬಂದಿ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಅಗತ್ಯ ಮೂಲದಾಖಲಾತಿಗಳನ್ನು ಪಡೆದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುವಂತೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಆರ್.ನಾಗರಾಜು ತಿಳಿಸಿದರು.

ಅವರು ಶುಕ್ರವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕೆಂಬುದು ಸರಕಾರದ ಉದ್ದೇಶವಾಗಿದ್ದು, ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹರಿಪ್ರಸಾದ್ ಮಾತನಾಡಿ, ಫೆ. ೨೦೨೬ ರಲ್ಲಿ ತಾಲೂಕಿನ ೭೫೯೮೨ ಫಲಾನುಭವಿಗಳಿಗೆ ೧೫.೨೦ ಕೋಟಿ ರು.ಗಳು ಜಮೆಯಾಗಿದೆ, ಗೃಹಲಕ್ಷ್ಮೀ ಫಲಾನುಭವಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಯನ್ವಯ ನಿಯಾಮಾನುಸಾರ ಪರಿಷ್ಕರಣೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಹೊಸ ಪಡಿತರ ಚೀಟಿ ಕೋರಿ ೬೩೩೩ ಅನ್ ಲೈನ್ ಅರ್ಜಿಗಳು ಸ್ವೀಕೃತವಾಗಿದ್ದೂ, ಈ ಪೈಕಿ ೫೭೯೧ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಹಾಗೂ ೫೪೨ ಪರಿಶೀಲನೆ ಹಂತದಲ್ಲಿವೆ ಎಂದು ಆಹಾರ ಮತ್ತು ನಾಗರೀಕ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ಆದಾಯ ತೆರಿಗೆ ಪಾವತಿದಾರರ ಹೊರತಾಗಿ ಬಿಪಿಎಲ್ ಕಾರ್ಡ್‌ಗಳ ರದ್ಧತಿಯ ಕುರಿತು ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದಾಗ, ಅಂತಹ ಪ್ರಕರಣಗಳ ಕುರಿತು ಪೂರಕ ದಾಖಲಾತಿಗಳೊಂದಿಗೆ ನಮ್ಮ ಇಲಾಖೆಗೆ ಮಾಹಿತಿ ಸಲ್ಲಿಸಿದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಆಹಾರ ನಿರೀಕ್ಷಕಕರು ಸಭೆಗೆ ಉತ್ತರಿಸಿದರು.

ಯುವನಿಧಿಯ ಯೋಜನೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಪದವೀಧರ ನಿರುದ್ಯೋಗ ಯುವಸಮೂಹವನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಧ್ಯಕ್ಷರು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರೀಶ್ ಆರ್., ತಾಲೂಕು ಪಂಚಾಯಿತಿ ಯೋಜನಾಧಿಕಾರಿಗಳಾದ ರಂಗನಾಥ್ ಆರ್, ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದ ಅಗತ್ಯಕ್ಕೆ ಸ್ಪಂದಿಸುವ ಎಐ ಪರಿಹಾರ ರೂಪಿಸಿ
ಮತದಾರರು ಸಮಗ್ರ ಪರಿಷ್ಕರಣೆಗೆ ಸಹಕಾರ ನೀಡಿ