ಮಕ್ಕಳ ಸಹಾಯವಾಣಿ ಪರಿಷ್ಕೃತ ಲೋಗೋ ಬಿಡುಗಡೆ

KannadaprabhaNewsNetwork |  
Published : Jul 25, 2025, 12:32 AM IST
24ಕೆಪಿಎಲ್24 ಮಕ್ಕಳ ಸಹಾಯವಾಣಿಯ ಪರಿಷ್ಕೃತ ಲೋಗೋ ಬಿಡುಗಡೆ | Kannada Prabha

ಸಾರಾಂಶ

ಮಿಷನ್ ವಾತ್ಸಲ್ಯ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಮಕ್ಕಳ ಸಹಾಯವಾಣಿ 1098 ಅನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅದರ ಲೋಗೋ ಬದಲಾಯಿಸಲಾಗಿದ್ದು, ಈ ಕುರಿತು ಸಮುದಾಯದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ.

ಕೊಪ್ಪಳ:

ಮಿಷನ್ ವಾತ್ಸಲ್ಯ ಯೋಜನೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಕ್ಕಳ ಸಹಾಯವಾಣಿ 1098ರ ಪರಿಷ್ಕೃತ ಲೋಗೋವನ್ನು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ಜಿಲ್ಲೆಯ ಶೈಕ್ಷಣಿಕ ಸಂಸ್ಥೆ, ಸರ್ಕಾರಿ ಕಚೇರಿಗಳ ಆವರಣ, ಬಸ್ ನಿಲ್ದಾಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ 1098ರ ಕುರಿತು ಶಾಶ್ವತ ಬರಹ ಕಡ್ಡಾಯವಾಗಿ ಬರೆಯಿಸುವಂತೆ ಜಿಲ್ಲಾಧಿಕಾರಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಮಾತನಾಡಿ, ಮಿಷನ್ ವಾತ್ಸಲ್ಯ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಮಕ್ಕಳ ಸಹಾಯವಾಣಿ 1098 ಅನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅದರ ಲೋಗೋ ಬದಲಾಯಿಸಲಾಗಿದ್ದು, ಈ ಕುರಿತು ಸಮುದಾಯದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ಪರಿಷ್ಕರಣೆ 2023ರನ್ವಯ ಹಾಗೂ ಹೈಕೋರ್ಟ್‌ ನಿರ್ದೇಶನದಂತೆ ಶೈಕ್ಷಣಿಕ ಸಂಸ್ಥೆ, ವಸತಿ ನಿಲಯ, ವಸತಿ ಸಹಿತ ಶೈಕ್ಷಣಿಕ ಸಂಸ್ಥೆ, ಸರ್ಕಾರಿ ಕಚೇರಿಗಳ ಆವರಣಗಳಲ್ಲಿ ಈ ಮಕ್ಕಳ ಸಹಾಯವಾಣಿ ಕುರಿತು ಕಡ್ಡಾಯವಾಗಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಇದರಿಂದ ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಕ್ಕಳು ತಮ್ಮ ಸಮಸ್ಯೆ ಕುರಿತು ಅಥವಾ ಮಗುವಿನ ಸಂಕಷ್ಟಕರ ಪರಿಸ್ಥಿತಿಯ ಕುರಿತು ಸಾರ್ವಜನಿಕರು ಈ ಸಹಾಯವಾಣಿಗೆ ಮಾಹಿತಿ ನೀಡಬಹುದಾಗಿದೆ. ಮಾಹಿತಿ ಲಭ್ಯವಾದ 60 ನಿಮಿಷದಲ್ಲಿ ಅಂತಹ ಮಗುವನ್ನು ರಕ್ಷಿಸಿ ಮುಂದಿನ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.

ಈ ವೇಳೆ ಎಸ್ಪಿ ಡಾ. ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಕೃಷ್ಣಮೂರ್ತಿ ದೇಸಾಯಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ, ಡಿಡಿಪಿಐ ಶ್ರೀಶೈಲ ಬಿರಾದಾರ, ಡಿಡಿಪಿಯು ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''