ಗ್ಯಾರಂಟಿ ಅನ್ಯ ರಾಜ್ಯದವರಿಗೆ ಸಿಗುವುದನ್ನು ತಪ್ಪಿಸಲು ಪರಿಷ್ಕರಣೆ: ಶಾಸಕಿ ರೂಪಕಲಾ ಶಶಿಧರ್

KannadaprabhaNewsNetwork |  
Published : Jun 21, 2026, 02:00 AM IST
19ಬಿಟಿಆರ್..1. ಬೇತಮಂಗಲ ಹೋಬಳಿಯ ಪಾರಂಡಹಳ್ಳಿಯಲ್ಲಿ ಬಿಎಲ್ಎ ಹಾಗೂ ಪಕ್ಷದ ಮುಖಂಡರ ಪ್ರಮುಖ ಸಭೆಯಲ್ಲಿ ಶಾಸಕಿ ಎಂ ರೂಪಕಲಾ ಅವರು ಮಾತನಾಡಿದರು. | Kannada Prabha

ಸಾರಾಂಶ

ಯಾರೊಬ್ಬರೂ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬಾರದು. ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಮಾಡಲು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ತಳಮಟ್ಟದಲ್ಲಿ ಶ್ರಮಿಸಬೇಕು.

ಕನ್ನಡಪ್ರಭ ವಾರ್ತೆ ​ಬೇತಮಂಗಲ

ರಾಜ್ಯದ ಜನತೆಗೆ ಸಿಗಬೇಕಾದ ಗ್ಯಾರಂಟಿ ಸೌಲಭ್ಯಗಳನ್ನು ಅನ್ಯ ರಾಜ್ಯದ ಜನ ಪಡೆಯುತ್ತಿರುವುದರಿಂದ ಅರ್ಹರಿಗೆ ಮಾತ್ರ ಸೌಲಭ್ಯ ಸಿಗಲಿ ಎಂಬ ಉದ್ದೇಶದಿಂದ ಮರು ಅರ್ಜಿ ಆಹ್ವಾನಿಸಲಾಗಿದೆ ಎಂದು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ತಿಳಿಸಿದರು.

ಹೋಬಳಿಯ ಪಾರಾಂಡ್ಲಹಳ್ಳಿ ಗ್ರಾಮದ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಎಲ್ಎ ಹಾಗೂ ಪಕ್ಷದ ಮುಖಂಡರ ಪ್ರಮುಖ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ​ಯಾರೊಬ್ಬರೂ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬಾರದು. ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಮಾಡಲು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ತಳಮಟ್ಟದಲ್ಲಿ ಶ್ರಮಿಸಬೇಕು ಎಂದು ಶಾಸಕರು ಕರೆ ನೀಡಿದರು.

​ಸಭೆಯಲ್ಲಿ ಕೆಜಿಎಫ್ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರಾದ ಅ.ಮು.ಲಕ್ಷ್ಮೀನಾರಾಯಣ, ವಿಜಯ ರಾಘುವ ರೆಡ್ಡಿ, ರಾಧಕೃಷ್ಣ ರೆಡ್ಡಿ, ಕಮ್ಮಸಂದ್ರ ನಾಗರಾಜ್, ಪದ್ಮನಾಭ ರೆಡ್ಡಿ, ಸುಬ್ಬಾರೆಡ್ಡಿ, ಕಳ್ಳಿಕುಪ್ಪ ವೆಂಕಟಾಚಲಪತಿ, ನಲ್ಲೂರು ಶಂಕರ್, ಸ್ಕೂಲ್ ವೆಂಕಟೇಶ್, ಹಂಗಳ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗಳ ಎಲ್‌ಕೆಜಿ–ಯುಕೆಜಿಗೆ ಉತ್ತಮ ಸ್ಪಂದನೆ
ಶಿಥಿಲಾವಸ್ಥೆ ತಲುಪಿದ ಶಿರಸಿ ಪೊಲೀಸ್ ವಸತಿಗೃಹ, ಸೋರುವ ಮನೆಯಲ್ಲೇ ವಾಸ