ಹಾಸನಾಂಬೆ ದರ್ಶನ ಪಡೆದ ರಿಷಬ್‌ ಶೆಟ್ಟಿ

KannadaprabhaNewsNetwork |  
Published : Oct 20, 2025, 01:02 AM IST
19ಎಚ್ಎಸ್ಎನ್17 :  | Kannada Prabha

ಸಾರಾಂಶ

ಕಾಂತಾರ ಸಿನಿಮಾದ ಮೂಲಕ ದಾಖಲೆ ನಿರ್ಮಿಸಿದ ನಾಯಕ ನಟ ರಿಷಬ್ ಶೆಟ್ಟಿ ದಂಪತಿಗಳು ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದೇ ವೇಳೆ ಶ್ರೀ ಸಿದ್ದೇಶ್ವರ ದೇವಾಲಯಕ್ಕೂ ತೆರಳಿದರು. 

 ಹಾಸನ :   ಕಾಂತಾರ ಸಿನಿಮಾದ ಮೂಲಕ ದಾಖಲೆ ನಿರ್ಮಿಸಿದ ನಾಯಕ ನಟ ರಿಷಬ್ ಶೆಟ್ಟಿ ದಂಪತಿಗಳು ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದೇ ವೇಳೆ ಶ್ರೀ ಸಿದ್ದೇಶ್ವರ ದೇವಾಲಯಕ್ಕೂ ತೆರಳಿದರು.

ಕುಟುಂಬ ಸಮೇತ ಹಾಸನಾಂಬೆ ದೇವಿ ದರ್ಶನ ಸಿಕ್ಕಿರುವುದು ಬಹಳ ಖಷಿಯಾಗಿದೆ. ಬೇಡಿಕೊಂಡಿರುವುದು ನಮಗೆ ಸಂಬಂಧಪಟ್ಟಿರುವುದು ನಿಮಗೆ ಏಕೆ ಹೇಳಲಿ! ಪ್ರತಿಯೊಬ್ಬ ಮನುಷ್ಯನಿಗೂ ಪ್ರಾರ್ಥನೆ ಇದ್ದೆ ಇರುತ್ತದೆ. ಪ್ರಾರ್ಥನೆಯನ್ನು ದೇವರಲ್ಲಿ ಮಾಡೆ ಮಾಡುತ್ತಾರೆ. ಆ ಪಾರ್ಥನೆ ನಮ್ಮ ಮತ್ತು ದೇವರ ಮಧ್ಯೆ ಇರಬೇಕು ಅಷ್ಟೆ. ಅದನ್ನು ಯಾರಿಗೂ ಹೇಳಬಾರದು ಎಂದರು. ಕಾಂತರಾ ಸಿನಿಮಾ ಒಂದು ಅಧ್ಯಾತ್ಮಿಕವಾಗಿರಬಹುದು, ಒಂದು ದೈವತ್ವ ಎಂಬುದು ದೇವರ ಬಗ್ಗೆ ಆಗಬಹುದು, ಸಿನಿಮಾ ಮಾಡುತ್ತೇವೆ ಎಂದರೇ ಒಂದು ನಂಬಿಕೆ ಇಟ್ಟುಕೊಂಡು ಮಾಡುತ್ತೇವೆ. ಆಗಿ ನಂಬಿಕೆ ಇದ್ದರೇ ಮಾತ್ರ ಸಾಧ್ಯ. ಆಗೇ ಸರಿಯಾದ ರೀತಿಯಲ್ಲಿ ಬರುತ್ತದೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.  

ನಾನಾಷ್ಟೆ ಅಲ್ಲ, ನಮ್ಮ ತಂಡ ಮತ್ತು ಕುಟುಂಬ ನಿರ್ಮಾಪಕರು ಸೇರಿದಂತೆ ಪ್ರತಿಯೊಬ್ಬರೂ ಕೂಡ ನಂಬಿ ಸಿನಿಮಾ ಮಾಡಿದ್ದೇವೆ. ಜನರ ಆಶೀರ್ವಾದ ಮತ್ತು ದೈವ ಆಶೀರ್ವಾದದಿಂದ ಇಷ್ಟೊಂದು ದೊಡ್ಡ ಮಟ್ಟದಲ್ಲಿ ತಲುಪಿದೆ. ಫಿಲಂ ಯಶಸ್ವಿಗೊಂಡ ಮೇಲೆ ಎಲ್ಲಾ ಕಡೆ ಕೃತಜ್ಞತೆ ಸಲ್ಲಿಸುವ ಕೆಲಸ ಮಾಡಲಾಗುತ್ತಿದೆ. ಜನರ ಬಳಿಯೂ ಕೂಡ ಹೋಗುತ್ತಿದ್ದು, ಆಗೇ ದೇವಸ್ಥಾನದ ಬಳಿಯೂ ಹೋಗಲಾಗುತ್ತಿದೆ. 

ಮುಂದಿನ ಸಿನಿಮಾ ಬಗ್ಗೆ ಈಗಾಗಲೇ ಹೇಳಲಾಗಿದೆ. ಮುಂದೆ ನಿರ್ಮಾಪಕರು ಪ್ರಚಾರ ಮಾಡುತ್ತಾರೆ. ಆಗ ಗೊತ್ತಾಗುತ್ತದೆ. ನಿಮ್ಮ ಚಿತ್ರಗಳೆಲ್ಲಾ ಆಧ್ಯಾತ್ಮಿಕವಾಗಿರುತ್ತದೆಯೇ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಾಯಕರ ನಟ, ಮೊದಲು ಇರಲಿಲ್ಲ. ಈಗ ಕಾಂತರಾ ಅಷ್ಟೆ ಆಧ್ಯಾತ್ಮಿಕವಾಗಿ ಬಿತ್ತರವಾಗಿದೆ. ಸಿನಿಮಾ ಎಂದ ಮೇಲೆ ಬೇರೆ ಬೇರೆ ರೀತಿ ನಿರ್ಮಿಸುವುದು ಇದ್ದೆ ಇರುತ್ತದೆ ಎಂದು ಉತ್ತರಿಸಿದರು. ಹಾಸನ ಎಂದರೇ ಒಂದು ವಿಶೇಷ. ನಮ್ ಇಡೀ ತಂಡಕ್ಕೆ ಬಹಳ ಯಶಸ್ಸು ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾ ಹಾಸನದಲ್ಲೆ ಶೂಟಿಂಗ್ ಮಾಡಿರುವುದು ಆಗಾಗಿ ಇಲ್ಲಿ ಹೆಚ್ಚಿನ ಜನ ಸ್ನೇಹಿತರು, ಹಿರಿಯರು, ಅಧಿಕಾರಿಗಳು ಎಲ್ಲಾರು ನಮಗೆ ಸಹಕಾರ ಮಾಡಿದ್ದಾರೆ. ಇವತ್ತು ಪೊಲೀಸ್ ಇಲಾಖೆಗೆ ಅಭಿನಂದನೆ ಹೇಳುವುದಕ್ಕೆ ಇಷ್ಟ ಪಡುತ್ತೇನೆ. ಇಷ್ಟು ಅದ್ಭುತವಾಗಿ ದರ್ಶನ ಮಾಡಿಕೊಂಡು ಬರುವುದಕ್ಕೆ ದೇವಸ್ಥಾನದವರು ಸೇರಿ ಅವಕಾಶ ಮಾಡಿಕೊಟ್ಟಿದ್ದಾರೆ ಅದಕ್ಕೆ ಅಭೀನಂದನೆ ಹೇಳುತ್ತೇನೆ ಎಂದು ಹೇಳಿದರು.

ನಾಯಕ ನಟ ರಿಷಿಬ್ ಶೆಟ್ಟಿ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸುತ್ತಿದ್ದಂತೆ ಸರದಿ ಸಾಲಿನಲ್ಲಿ ಇದ್ದ ಭಕ್ತಾದಿಗಳಲ್ಲಿ ಉತ್ಸಹ ಕಂಡು ಬಂದು ನಾಯಕ ನಟನನ್ನು ಕೂಗಿ ಕರೆದರು. ಘೋಷಣೆ ಕೂಗಿದರು. ನಂತರ ರಿಷಿಬ್ ಶೆಟ್ಟಿ ಅವರು ನಿಂತಲ್ಲೆ ಕೈ ಬಿಸಿ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಮೊದಲು ಆಗಮಿಸಿದ್ದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್‌ ನೋಡಿ ಮಾತನಾಡಿಸಲು ಕರೆಯೋಲೆ ಕೊಟ್ಟರು. ನಂತರ ವಿಷಯ ತಿಳಿದು ರಿಷಿಬ್ ಶೆಟ್ಟಿ ಓಡಿ ಬಂದು ಶಿವರಾಜ ಕುಮಾರ್‌ ಕಾಲು ಮುಗಿದು ಶರಣು ಮಾಡಿಕೊಂಡರು. ಈ ವೇಳೆ ಕೆಲ ಸಮಯ ಮಾತನಾಡಿ ಹೊರಟರು.

PREV
Read more Articles on

Recommended Stories

ಖಾಸಗಿ ಸಂಘಟನೆಗಳಿಗೆ ನಿಷೇಧ ಹೇರಿದ್ದು ಜಗದೀಶ್‌ ಶೆಟ್ಟರ್‌ : ಪರಂ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ