ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ಪ್ರತಿವರ್ಷ ಜನರಲ್ಲಿ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸುವ ಕುರಿತು ಅರಿವು ಮೂಡಿಸುವ ಸಲುವಾಗಿ 40 ಸಾವಿರ ಕೋಟಿ ಹಣ ಖರ್ಚು ಮಾಡುತ್ತಿದ್ದರೂ ಸಹ ರಸ್ತೆ ಅಪಘಾತದಲ್ಲಿ 1.68 ಲಕ್ಷ ಜನರು ಮೃತಪಟ್ಟಿರುತ್ತಾರೆ. ಈ ಪೈಕಿ 30 ಸಾವಿರ ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಮೃತಪಟ್ಟಿರುವುದು ದುರಾದೃಷ್ಟ ಎಂದರು.ಏಡ್ಸ್ಗಿಂತ ಮಹಾ ಕಾಯಿಲೆ ಯಾವುದೆಂದರೆ ಅದು ರಸ್ತೆ ಅಪಘಾತ. ಹಾಗಾಗಿ ಬೈಕ್ ಸವಾರರು ತಮ್ಮ ಅತ್ಯಮೂಲ್ಯವಾದ ಜೀವ ರಕ್ಷಣೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಯೇ ಬೈಕ್ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಏಡ್ಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವುದು ತಿಳಿದು ಬಂದಿದೆ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಏಡ್ಸ್ ನಿಯಂತ್ರಿಸುವ ಕುರಿತು ಜನರಲ್ಲಿ ಅರಿವು ಮೂಡಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದೆ ಎಂದರು.
ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ವಿಶ್ವದಾದ್ಯಂತ ಬಹಳ ವೇಗವಾಗಿ ಹರಡಿದ ಕೊರೋನಾ ಎಂಬ ಮಹಾಮಾರಿಗೆ ಸಾಕಷ್ಟು ಸಾವು- ನೋವುಗಳು ಸಂಭವಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದೇ ರೀತಿ ಏಡ್ಸ್ ಸೋಂಕು ಹರಡಿದ್ದರೆ ಪ್ರಪಂಚವೇ ಸರ್ವನಾಶವಾಗುತ್ತಿತ್ತು. ಅತ್ಯಮೂಲ್ಯ ಬದುಕನ್ನು ಪಡೆದು ಭೂಮಿಗೆ ಬಂದಿರುವ ಪ್ರತಿಯೊಬ್ಬರೂ ಸರಿಯಾದ ಮಾರ್ಗದಲ್ಲಿ ನಡೆಯಬೇಕಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಪಟ್ಟಣದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಲ್ಲಿ ಆಯೋಜಿಸಿದ್ದ ಏಡ್ಸ್ ನಿಯಂತ್ರಿಸುವ ಕುರಿತಾದ ಜನಜಾಗೃತಿ ಜಾಥಾಗೆ ನ್ಯಾಯಾಧೀಶ ಯೋಗೇಶ್ ಮತ್ತು ಗಣ್ಯರು ಚಾಲನೆ ನೀಡಿದರು. ಬಳಿಕ ಚಾಮರಾಜನಗರ - ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸಲಾಯಿತು.