ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ವತಿಯಿಂದ ಕೆ.ಶೆಟ್ಟಹಳ್ಳಿ 25 ಲಕ್ಷ ರು., ಹೊನ್ನಾಯಕನಹಳ್ಳಿಯಲ್ಲಿ 25 ಲಕ್ಷ ರು. ವೆಚ್ಚದಲ್ಲಿ ಗ್ರಾಮ ಪರಿಮಿತಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮಸ್ಥರು ಹದಗೆಟ್ಟ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸಂಬಂಧಿಸಿದಂತೆ ಮನವಿ ಸಲ್ಲಿಸಿದ್ದು, ಇದಕ್ಕೆ ಪೂರಕವಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ ಎಂದರು.ಗ್ರಾಮಗಳ ಅಭಿವೃದ್ಧಿಯಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿ ಉಪಯೋಗವಾದಾಗ ಮಾತ್ರ ಕೆಲಸಗಳು ಸಾರ್ಥಕವಾಗುತ್ತವೆ. ಕಾಮಗಾರಿಯೂ ಉತ್ತಮ ಗುಣಮಟ್ಟದ ನಿರ್ವಹಿಸಿಲು ಹಾಗೂ ಸೂಕ್ತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.
ಟಿಎಪಿಸಿಎಂಎಸ್ ನೂತನ ಅಧ್ಯಕ್ಷ - ಉಪಾಧ್ಯಕ್ಷರು, ನಿರ್ದೇಶಕರಿಗೆ ಅಭಿನಂದನೆ
ತಾಲೂಕು ಟಿಎಪಿಸಿಎಂಎಸ್ನ ನೂತನ ಅಧ್ಯಕ್ಷ, ಉಪಾಧ್ಯಕ್ಷೆ ಹಾಗೂ ನಿರ್ದೇಶಕರನ್ನು ಉದ್ಯಮಿ ಸುಂಕಾ ತೊಣ್ಣೂರು ಶಿವಕುಮಾರ್ ಹಾಗೂ ಕನಗನಮರಡಿ ಸೊಸೈಟಿ ಅಧ್ಯಕ್ಷ ಹೆಗ್ಗಡಹಳ್ಳಿ ಎಚ್.ಜೆ.ರಾಮಕೃಷ್ಣ ಅಭಿಮಾನಿಗಳ ಬಳಗದಿಂದ ಅಭಿನಂದಿಸಲಾಯಿತು.
ಉದ್ಯಮಿ ಶಿವಕುಮಾರ್ ಮಾತನಾಡಿ, ಕ್ಷೇತ್ರದ ಮತದಾರರು ಎಲ್ಲಾ ಆಶೀರ್ವಾದದಿಂದ ಟಿಎಪಿಸಿಎಂಎಸ್ ಗೆ ನೂತನವಾಗಿ ಆಯ್ಕೆಯಾಗಿರುವ ಎಲ್ಲರು ಜತೆಗೂಡಿ ಸಂಘದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಜತೆಗೂ ಸಂಘವನ್ನು ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ವಿಶ್ವಕರ್ಮ ಸಮುದಾಯದ ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್, ಉದ್ಯಮಿ ಸತೀಶ್, ರಮೇಶ್ ಸೇರಿದಂತೆ ಹಾಜರಿದ್ದರು.