ಸೊಪ್ಪಿನಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಕುಟುಂಬಗಳಿಗೆ ರಸ್ತೆ ತಡೆ

KannadaprabhaNewsNetwork |  
Published : Dec 10, 2025, 12:30 AM IST
9ಎಚ್ಎಸ್ಎನ್5 :  | Kannada Prabha

ಸಾರಾಂಶ

ಸೊಪ್ಪಿನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳು ಮನೆಗೆ ಹೋಗಿ ಬರುವುದಕ್ಕೆ ತಿರುಗಾಡಲು ಕೆಲವರು ಅಡ್ಡಿಪಡಿಸುತ್ತಿದ್ದು, ತಿರುಗಾಡಲು ರಸ್ತೆ ಬಿಡಿಸಿಕೊಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಸಂಘಟನೆಯಿಂದ ತಹಸೀಲ್ದಾರ್‌ ಕಚೇರಿ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಲಾಯಿತು. ದಿನನಿತ್ಯ ನಡೆಯುತ್ತಿರುವ ಈ ಅಡ್ಡಿಪಡಿವುದರಿಂದ ಕುಟುಂಬಗಳು ತಮ್ಮ ಮನೆಗಳಿಗೆ ಹೋಗುವುದಕ್ಕೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ವೆ ನಂ. ೨ರಲ್ಲಿ ಇರುವ ಸುಮಾರು ಒಂದು ಗುಂಟೆ ಖಾರಾಬು ಜಾಗವನ್ನು ರಸ್ತೆಗಾಗಿ ಬಳಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ತಾಲೂಕಿನ ಸಾಲಗಾಮೆ ಹೋಬಳಿಯ ಸೊಪ್ಪಿನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳು ಮನೆಗೆ ಹೋಗಿ ಬರುವುದಕ್ಕೆ ತಿರುಗಾಡಲು ಕೆಲವರು ಅಡ್ಡಿಪಡಿಸುತ್ತಿದ್ದು, ತಿರುಗಾಡಲು ರಸ್ತೆ ಬಿಡಿಸಿಕೊಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಸಂಘಟನೆಯಿಂದ ತಹಸೀಲ್ದಾರ್‌ ಕಚೇರಿ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಲಾಯಿತು.

ಇದೇ ವೇಳೆ ಭೀಮ್ ಆರ್ಮಿ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್.ಎಸ್. ಪ್ರದೀಪ್ ಮಾತನಾಡಿ, ತಾಲೂಕಿನ ಸಾಲಗಾಮೆ ಹೋಬಳಿಯ ಸೊಪ್ಪಿನಹಳ್ಳಿ ಗ್ರಾಮದಲ್ಲಿ ಸುಮಾರು ೨೫-೩೦ ವರ್ಷಗಳಿಂದ ಸರ್ಕಾರಿ ಅನುದಾನದಲ್ಲಿ ನಿರ್ಮಿತ ಮನೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿಯ ಸ್ವಾಮಿ ರಾಮಯ್ಯ ಮತ್ತು ರಮೇಶ್ ರಾಮಯ್ಯ ಅವರ ಕುಟುಂಬಗಳು ಗಂಭೀರ ತೊಂದರೆ ಎದುರಿಸುತ್ತಿವೆ. ಇವರ ಮನೆಗಳಿಗೆ ಹೋಗುವ ದಾರಿಯನ್ನು ಗ್ರಾಮದ ಕೆಲವರು ತಡೆ ಮಾಡುತ್ತಿರುವುದನ್ನು ಖಂಡಿಸಿದರು.

ಮಕ್ಕಳು ಶಾಲೆಗೆ ಹೋಗಲು ದಾರಿ ಬಿಡದೇ ತೊಂದರೆ ನೀಡಿದ್ದು, ಹಲವಾರು ಬಾರಿ ಮಕ್ಕಳಿಗೆ ಹೊಡೆದಿರುವ ಘಟನೆ ನಡೆದಿದ್ದು, ಮಹಿಳೆಯರ ಮೇಲೂ ಅವಾಚ್ಯ ನಿಂದನೆ ಮಾಡಲಾಗಿದೆ ಎನ್ನಲಾಗಿದೆ. ಮನೆ ಹತ್ತಿರದ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಸಾಗಾಟ ಮಾಡಲು ಸಹ ಅಡ್ಡಿಪಡಿಸಿರುವುದರಿಂದ ಬೆಳೆ ಹಾನಿಯಾದ ಘಟನೆಗಳೂ ಸಂಭವಿಸಿವೆ. ಇದಲ್ಲದೆ ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವುಗೊಂಡಿರುವುದಾಗಿ ದೂರಿದರು. ದಿನನಿತ್ಯ ನಡೆಯುತ್ತಿರುವ ಈ ಅಡ್ಡಿಪಡಿವುದರಿಂದ ಕುಟುಂಬಗಳು ತಮ್ಮ ಮನೆಗಳಿಗೆ ಹೋಗುವುದಕ್ಕೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ವೆ ನಂ. ೨ರಲ್ಲಿ ಇರುವ ಸುಮಾರು ಒಂದು ಗುಂಟೆ ಖಾರಾಬು ಜಾಗವನ್ನು ರಸ್ತೆಗಾಗಿ ಬಳಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ಸಂಘಟನೆಯ ಉಪಾಧ್ಯಕ್ಷ ನವೀನ್ ಕುಮಾರ್, ವರುಣ್ ಕುಮಾರ್‌, ಚನ್ನರಾಯಪಟ್ಟಣ ತಾಲೂಕು ಉಪಾಧ್ಯಕ್ಷ ಸಂತೋಷ್, ತಾಲೂಕು ಅಧ್ಯಕ್ಷ ರವಿ, ಸಿದ್ದೇಶ್, ಕಿರಣ್ ಹಾಗೂ ಸಂಬಂಧಪಟ್ಟ ಕುಟುಂಬದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ