ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದ್ರೆ,
ಬೆಳಗ್ಗೆಯೇ ಹೆದ್ದಾರಿ ತಡೆದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ಆರಂಭಿಸಿದ್ದರಿಂದ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮುಗುಳುವಳ್ಳಿ ಭಾಗದಿಂದ ಪ್ರತಿದಿನ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ಗಳನ್ನು ಅವಲಂಭಿಸಿ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಒಂಭತ್ತು ಗಂಟೆಗೆ ಬರುವ ಬಸ್ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಜೊತೆಗೆ ವೇಗದೂತ ಸೇರಿದಂತೆ ಇತರೆ ಬಸ್ಗಳು ಮುಗುಳುವಳ್ಳಿಯಲ್ಲಿ ನಿಲುಗಡೆ ನೀಡುತ್ತಿಲ್ಲ. ಹೀಗಾಗಿ ಪ್ರತಿದಿನವೂ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆ ಕೆಎಸ್ಆರ್ಟಿಸಿ ಚಿಕ್ಕಮಗಳೂರು ಉಪ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮುಗುಳುವಳ್ಳಿ ಗೇಟ್ ಬಳಿ ಬಸ್ ನಿಲ್ಲಿಸಬೇಕು ಎಂದು ಮನವಿ ಸಲ್ಲಿಸಿದ್ದೆವು. ಅದರಂತೆ ಅವರು ಬಸ್ ನಿಲುಗಡೆ ಮಾಡುವಂತೆ ಆದೇಶ ಹೊರಡಿಸಿದ್ದರು. ಆದರೆ ಯಾವುದೇ ಬಸ್ಗಳು ನಿಲ್ಲಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಮುಗುಳುವಳ್ಳಿಯಲ್ಲಿ ನಿಲ್ಲಿಸದ ಬಸ್ಗಳು ಮಾಗಡಿ ಹ್ಯಾಂಡ್ ಪೋಸ್ಟ್ ಇಲ್ಲವೇ ಹಿರೇಮಗಳೂರಿನಲ್ಲಿ ನಿಲ್ಲಿಸಲಾಗುತ್ತಿದೆ. ಹೀಗಾಗಿ ಮುಗುಳುವಳ್ಳಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಜನ ನಾಲ್ಕಾರು ಕಿ.ಮೀ. ನಡೆಯುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಕೂಡಲೇ ಮುಗುಳುವಳ್ಳಿಯಲ್ಲಿ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಸ್ತೆ ತಡೆ ನಡೆಯುತ್ತಿದ್ದ ಸ್ಥಳಕ್ಕೆ ತಹಸೀಲ್ದಾರ್ ರೇಷ್ಮಾ ಶೆಟ್ಟಿ ಸೇರಿದಂತೆ ಕೆಎಸ್ಆರ್ಟಿಸಿ ಅಧಿಕಾರಿಗಳು ಆಗಮಿಸಿ ಜನರ ಅಹವಾಲು ಆಲಿಸಿ ಕೂಡಲೇ ಬಸ್ ನಿಲುಗಡೆ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.