ತಮಿಳುನಾಡಿಗೆ ನೀರು ಹರಿಸುವಂತೆ ಸಮಿತಿ ಆದೇಶ ವಿರೋಧಿಸಿ ರಸ್ತೆತಡೆ, ಪ್ರತಿಭಟನೆ

KannadaprabhaNewsNetwork |  
Published : Jul 29, 2026, 01:45 AM IST
28ಕೆಎಂಎನ್ ಡಿ21 | Kannada Prabha

ಸಾರಾಂಶ

ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದು ಆದೇಶ ಸರಿಯಲ್ಲ. ಸಮಿತಿ ಈ ಆದೇಶವನ್ನು ಮರು ಪರಿಶೀಲನೆ ನಡೆಸಬೇಕು. ರಾಜ್ಯ ಸರಕಾರ ಮನವರಿಕೆ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ನೀರು ಹರಿಸಬಾರದು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ವಿರೋಧಿಸಿ ಪಟ್ಟಣದಲ್ಲಿ ರೈತಸಂಘ ಕಾರ್ಯಕರ್ತರು ಮಂಗಳವಾರ ಸಂಜೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪಟ್ಟಣದ ಐದು ದೀಪದ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ವಿರುದ್ದ ಘೋಷಣೆ ಕೂಗಿದರು. ಮಳೆ ಇಲ್ಲದೆ ಕೆಆರ್ ಎಸ್ ಜಲಾಶಯ ಬರಿದಾಗಿದ್ದು, ಕುಡಿಯುವ ನೀರಿಗಾಗಿಯೇ ಇಲ್ಲಿನ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದು ಆದೇಶ ಸರಿಯಲ್ಲ. ಸಮಿತಿ ಈ ಆದೇಶವನ್ನು ಮರು ಪರಿಶೀಲನೆ ನಡೆಸಬೇಕು. ರಾಜ್ಯ ಸರಕಾರ ಮನವರಿಕೆ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ಒತ್ತಾಯಿಸಿದರು.

ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಜಲಾಶಯ ಒತ್ತುವರಿಯಾಗಿದ್ದು, ಮೊದಲಿನಷ್ಟು ನೀರು ಸಂಗ್ರಹವಾಗುತ್ತಿಲ್ಲ. ಜತೆಗೆ ಬೆಂಗಳೂರು, ಮೈಸೂರು, ಮಂಡ್ಯ ಹೀಗೆ ಹಲವು ಜಿಲ್ಲೆಗಳಿಗೆ ಇಲ್ಲಿಂದ ಕುಡಿಯುವ ನೀರಿಗಾಗಿ ಯೋಜನೆ ರೂಪಿಸಲಾಗಿದೆ. ಜತೆಗೆ ಮತ್ತೆ 6 ಟಿಎಂಸಿ ನೀರನ್ನು ಬೆಂಗಳೂರು ನಗರಕ್ಕೆ ತೆಗೆದುಕೊಂಡು ಹೋಗಲು ಸರಕಾರ ಯೋಜನೆ ರೂಪಿಸುತ್ತಿದೆ ಎಂದು ಕಿಡಿಕಾರಿದರು.

ರೈತರು, ಜನರು ನೀರಿಗಾಗಿ ಹಾಹಾಕಾರ ಎದುರಿಸುತ್ತಿದ್ದಾರೆ. ರಾಜಕೀಯ ಪಕ್ಷಗಳು, ಸರಕಾರಗಳು ನಮ್ಮನ್ನು ರಕ್ಷಣೆ ಮಾಡೋದಿಲ್ಲ. ಈ ವಿಚಾರದಲ್ಲಿ ಎಲ್ಲಾ ರೈತರು ಸಂಘಟನೆಗಳು ಒಟ್ಟಾಗಿ ಹೋರಾಟ ರೂಪಿಸಿ ಸರಕಾರಗಳಿಗೆ ಎಚ್ಚರಿಕೆ ನೀಡಬೇಕು. ಒಂದು ವೇಳೆ ನೀರು ಹರಿಸಿದರೆ ಉಗ್ರ ಸ್ವರೂಪರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ಮಂಜುನಾಥ್, ನಾಗರಾಜು, ಅಮೃತಿರಾಜಶೇಖರ, ರಾಮಕೃಷ್ಣ, ವಿಜಿಕುಮಾರ್, ರಘು, ಶಿವಕುಮಾರ್, ಸಂತೋಷ್, ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 20,668 ಚದರ ಕಿ.ಮೀ.ಪರಿಸರ ಸೂಕ್ಷ್ಮ ಪ್ರದೇಶ: ಕೇಂದ್ರ
ಕಾರ್ಮಿಕರ ನಡುವೆ ನಡೆದ ಜಗಳ ಸಾವಿನಲ್ಲಿ ಅಂತ್ಯ