ಶಿರಸಿ: ಶಿರಸಿಯಲ್ಲಿ ಪ್ರತಿದಿನ ಸಾರ್ವಜನಿಕರು ರಸ್ತೆಯಲ್ಲಿನ ಗುಂಡಿಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ. ಅಮಾಯಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಪದೇಪದೇ ಬಸ್ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಗುರುವಾರ ಸುಮಾರು ೨೫೦ಕ್ಕೂ ಅಧಿಕ ಸಾರ್ವಜನಿಕರು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನಗರದ ಮಾರಿಕಾಂಬಾ ದೇವಾಲಯದಿಂದ ಸಹಾಯಕ ಆಯುಕ್ತರ ಕಚೇರಿ ಬೃಹತ್ ಪಾದಯಾತ್ರೆ ಮೂಲಕ ಸಾಗಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ಎಲ್ಲ ಊರುಗಳಿಗೆ ಬಸ್ಸುಗಳು ಸರಿಯಾಗಿ ಬರುತ್ತಿಲ್ಲ. ಬಸ್ಸುಗಳು ರಸ್ತೆ ಮಧ್ಯದಲ್ಲಿಯೇ ಕೆಟ್ಟು ನಿಲ್ಲುತ್ತವೆ. ಕೆಟ್ಟು ನಿಂತ ಬಸ್ಸುಗಳಿಗೆ ಪರ್ಯಾಯ ವ್ಯವಸ್ಥೆ ಇಲ್ಲ. ಸರಿಯಾದ ನಿರ್ವಹಣೆಯೇ ಇಲ್ಲ. ಇರುವ ೧೪೯ ಬಸ್ಗಳಲ್ಲಿ ೭೯ ಬಸ್ ೧೦ ಲಕ್ಷ ಕಿಮೀಗೂ ಅಧಿಕ ದೂರ ಓಡಿದೆ. ಅಂತಹ ಬಸ್ಗಳಲ್ಲಿ ನಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲಾಗುತ್ತದೆ. ಮಕ್ಕಳ ಜೀವಗಳಿಗೆ ಹೆಚ್ಚು ಕಡಿಮೆ ಆದರೆ ಯಾರು ಹೊಣೆ? ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ಆಗುವ ನಷ್ಟಕ್ಕೆ ನೀವು ಹೊಣೆ ಆಗುತ್ತೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಬಿಜೆಪಿ ನಗರ ಮಂಡಲ ಪ್ರದಾನ ಕಾರ್ಯದರ್ಶಿ ಮಹಾಂತೇಶ ಹಾದಿಮನಿ, ಸಾಮಾಜಿಕ ಮುಖಂಡ ರಾಮು ಕಿಣಿ, ಹುತ್ಗಾರ ಗ್ರಾಪಂ ಉಪಾಧ್ಯಕ್ಷೆ ಶೋಭಾ ನಾಯ್ಕ, ಹಿರಿಯ ಹೋರಾಟಗಾರ ಜಯಶೀಲ ಗೌಡರ್, ಯುವ ಮುಖಂಡ ಮಂಜುನಾಥ ಪಾಟೀಲ್ ದಾಸನಕೊಪ್ಪ, ಪ್ರಮುಖರಾದ ಅನಿಲ ಕರಿ, ಚಂದ್ರಕಾಂತ ಹೆಗಡೆ ಕೊಳಗಿಬೀಸ್, ರವಿ ಹೆಗಡೆ ಹಳದೋಟ, ಪವಿತ್ರ ಹೊಸೂರು, ಅನಸೂಯಾ ಕಡಬಾಳ, ಜಿ.ವಿ. ಹೆಗಡೆ ಓಣಿಕೇರಿ, ಪ್ರಭಾವತಿ ಗೌಡ, ದೀಪಾ ನಾಯ್ಕ, ರಾಮು ಕಿಣಿ, ವಿ.ಎಂ. ಹೆಗಡೆ ಕಬ್ಬೆ, ನಾಗೇಂದ್ರ ತೆಪ್ಪಾರ್, ವಿಶ್ವನಾಥ ಬನವಾಸಿ, ಸಂತೋಷ ಗೌಡರ್, ಆದರ್ಶ ಪೈ, ಗಿರೀಶ ಸೋವಿನಕೊಪ್ಪ, ನಿರ್ಮಲಾ ಶೆಟ್ಟಿ ರಾಜು ಹೆಗಡೆ ಸೇರಿದಂತೆ ೨೫೦ಕ್ಕೂ ಅಧಿಕ ಪ್ರಮುಖರು ಭಾಗಿಯಾಗಿದ್ದರು.