ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣ ಸಂಚಾರಿ ಠಾಣೆ ಪೊಲೀಸರ ಸಹಯೋಗದಲ್ಲಿ ನಡೆದ ಜಾಥಾಗೆ ಪಿಎಸ್ಐ ಜೆ.ಈ.ಮಹೇಶ್ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳು ಪೊಲೀಸರೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ತೆರಳಿ ದ್ವಿಚಕ್ರ ವಾಹನಗಳ ಸವಾರರಿಗೆ ಗುಲಾಬಿ ಹೂ ನೀಡಿ ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು.
ಪಿಎಸ್ ಐ ಮಹೇಶ್ ಮಾತನಾಡಿ, ರಸ್ತೆ ಅಪಘಾತದಲ್ಲಿ ದಿನನಿತ್ಯ ನೂರಾರು ಜನರು ಸಾವಿಗೀಡಾಗುತ್ತಿದ್ದಾರೆ. ಇದಕ್ಕೆ ಸುರಕ್ಷತಾ ನಿಯಮಗಳನ್ನು ಅನುಸರಿಸದಿರುವುದೇ ಮುಖ್ಯ ಕಾರಣ ಎಂದು ಹೇಳಿದರು.ಕಾರು ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಇದರಿಂದ ಪ್ರಾಣ ಹಾನಿ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮನವಿ ಮಾಡಿದರು.
------------
27ಕೆಎಂಎನ್ ಡಿ24ಮದ್ದೂರಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಜಾಥಾ ನಡೆಸಿ ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದರು.