ರಸ್ತೆ ಸುರಕ್ಷತೆ ಜೀವನ ಶೈಲಿಯಾಗಬೇಕು: ಗಿರೀಶ್‌

KannadaprabhaNewsNetwork |  
Published : Feb 19, 2024, 01:32 AM IST
17ಕೆಪಿಎಸ್ಎನ್ಡಿ2: | Kannada Prabha

ಸಾರಾಂಶ

ರಸ್ತೆ ಸುರಕ್ಷತೆ ಎನ್ನುವುದು ಅದು ಘೋಷಣೆಯಲ್ಲ. ಅದು ಜೀವನಶೈಲಿ ಆಗಬೇಕು.

ಸಿಂಧನೂರು: ರಸ್ತೆ ಸುರಕ್ಷತೆ ಎನ್ನುವುದು ಅದು ಘೋಷಣೆಯಲ್ಲ. ಅದು ಜೀವನಶೈಲಿ ಆಗಬೇಕು ಎಂದು ಹಿಸಿ ದೇವಿಕ್ಯಾಂಪ್ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಗಿರೀಶ್.ವಿ ಹೇಳಿದರು.

ತಾಲೂಕಿನ ದುಗ್ಗಮ್ಮನ ಗುಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮ ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾತನಾಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದರು.

ಶಾಲಾ ಮುಖ್ಯ ಗುರು ಶಂಕರ ದೇವರು ಹಿರೇಮಠ ಮಾತನಾಡಿದರು.

ಒಂದರಿಂದ ಮೂರನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, 4ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಆಶು ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಪಾಲಕರು ಹಾಗೂ ಗ್ರಾಮಸ್ಥರು ರಸ್ತೆ ಸುರಕ್ಷತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಗುಡದಪ್ಪ, ಮಾಜಿ ಅಧ್ಯಕ್ಷ ಲಕ್ಷ್ಮಣ, ಅಂಗನವಾಡಿ ಶಿಕ್ಷಕಿ ಭಾಗ್ಯಶ್ರೀ, ಆಶಾಕಾರ್ಯಕಾರ್ತೆ ಶಂಕ್ರಮ್ಮ, ಶಿಕ್ಷಕರಾದ ಪ್ರದೀಪ ಕುಮಾರ, ರೇಣುಕಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ