ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಬೆಳ್ಳೂರು ಕ್ರಾಸ್ನಿಂದ ಹೊಸಮನೆ ಗೇಟ್ ವರೆಗೆ 2 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಮುಂದಿನ 50 ವರ್ಷಗಳ ದೂರದೃಷ್ಟಿಯಿಂದ ಬೆಳ್ಳೂರು ಕ್ರಾಸ್ನ ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿ ಮುಂಗಟ್ಟುಗಳನ್ನು ಯಾವುದೇ ಒತ್ತಡಕ್ಕೆ ಮಣಿಯದೆ ತೆರವುಗೊಳಿಸಿ ರಸ್ತೆ ಅಗಲೀಕರಣಗೊಳಿಸಲಾಗುವುದು. ಸ್ಥಳೀಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಬೆಳ್ಳೂರು ಕ್ರಾಸ್ ಜಂಕ್ಷನ್ ಬಳಿ ದೊಡ್ಡದಾದ ಸರ್ಕಲ್ ಮಾಡಿ ಬೆಳ್ಳೂರು ರಸ್ತೆಯ ಆಂಜನೇಯಸ್ವಾಮಿ ದೇವಸ್ಥಾನದವರೆಗೆ ಜೋಡಿ ರಸ್ತೆ ಮತ್ತು ಚರಂಡಿ ಹಾಗೂ ನಾಗಮಂಗಲ ರಸ್ತೆಯ 400 ಮೀಟರ್ ದೂರದವರೆಗೆ ಜೋಡಿರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ಹೊಸಮನೆ ಗೇಟ್ವರೆಗೆ ಮರು ಡಾಂಬರೀಕರಣ ಮಾಡಲಾಗುವುದು ಎಂದರು.ಈ ಕೆಲಸಕ್ಕೆ ಯಾರೇ ವಿರೋಧ ವ್ಯಕ್ತಪಡಿಸಿ ನನ್ನನ್ನು ಬೈದುಕೊಂಡರೂ ಲೆಕ್ಕಿಸುವುದಿಲ್ಲ. ರಸ್ತೆಗೆ ಸೇರಿದ ಜಾಗವನ್ನು ಅಳತೆ ಮಾಡಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಅಂಗಡಿ ಮುಂಗಟ್ಟುಗಳನ್ನು ಶೀಘ್ರದಲ್ಲಿ ತೆರವುಗೊಳಿಸುವಂತೆ ಸ್ಥಳದಲ್ಲಿದ್ದ ತಹಸೀಲ್ದಾರ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಲೂಕಿನ ಎ.ನಾಗತಿಹಳ್ಳಿಯೂ ಮಾದರಿ ಗ್ರಾಮಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪರಿಮಿತಿಯೊಳಗೆ ಕಾಂಕ್ರೀಟ್ ರಸ್ತೆ, ಚರಂಡಿ ಮತ್ತು ವಿದ್ಯುತ್ ಸಂಬಂಧಿತ ಕಾಮಗಾರಿಗಳಿಗೆ ಸಚಿವರು ಭೂಮಿ ಪೂಜೆ ನೆರವೇರಿಸಿದರು.
ನಂತರ ಬೆಳ್ಳೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವರು, ತಾಲೂಕಿನ ಕರಿಜೀರಹಳ್ಳಿಯಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿದರು.