ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಸೋಮವಾರಪೇಟೆಯಿಂದ ಕೂತಿ ಮಾರ್ಗದ ರಸ್ತೆಯ ಅಗಲೀಕರಣ, ಸಿ. ಮತ್ತು ಡಿ. ಜಾಗದ ಸಮಸ್ಯೆ, ಬಸ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಸೋಮವಾರಪೇಟೆ- ಕೂತಿ- ಗಡಿಕಲ್ಲುವರೆಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ 20 ಕೋಟಿ ರುಪಾಯಿ ಅನುದಾನ ಬಿಡುಗಡೆಯಾಗಿದೆ. ಮುಂದಿನ ತಿಂಗಳು ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಮಂತರ್ ಗೌಡ ತಿಳಿಸಿದರು.ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸಲು ಯಡೂರಿನಿಂದ ಪ್ರತ್ಯೇಕ ಫೀಡರ್ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಸಲ್ಲಿಸಿದರು. ರಾಮನಾಥಪುರದಿಂದ ಸೋಮವಾರಪೇಟೆ, ಕೂತಿ, ವನಗೂರು ಕೂಡುರಸ್ತೆ, ಸುಬ್ರಹ್ಮಣ್ಯ ಮಾರ್ಗದಲ್ಲಿ ನೂತನ ಬಸ್ ಸೇವೆ ಒದಗಿಸಬೇಕು. ಸಿ ಮತ್ತು ಡಿ ಜಾಗದ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಮಾಡಿದರು.
ಪ್ರಮುಖರಾದ ಐ.ಎಚ್. ನಿಂಗಪ್ಪ, ಬಸವರಾಜ್, ಎಡದಂಟೆ ಲವ, ಕೂತಿ ಗ್ರಾಮಾಧ್ಯಕ್ಷ ಹೆಚ್.ಎಂ. ಜಯರಾಮ್, ಮಾಜೀ ಅಧ್ಯಕ್ಷ ಎಚ್.ಡಿ. ಮೋಹನ್, ಕೆ.ಟಿ. ಜೋಯಪ್ಪ, ಸುರೇಶ್ ಚಕ್ರವರ್ತಿ ಸೇರಿದಂತೆ ಗ್ರಾಮಸ್ಥರು ಇದ್ದರು.