ಕಾಡಾನೆ ಹಾವಳಿಯಿಂದ ಬಸವಳಿದ ರೈತರಿಂದ ರಸ್ತೆತಡೆ

KannadaprabhaNewsNetwork |  
Published : Dec 04, 2024, 12:34 AM IST
3ಎಚ್ಎಸ್ಎನ್7 : ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು. | Kannada Prabha

ಸಾರಾಂಶ

ಕಾಡಾನೆ ಹಾವಳಿಯಿಂದ ಬಸವಳಿದ ರೈತರು ಬೇಲೂರು ತಾಲೂಕು ಬಿಕ್ಕೋಡು ಹೋಬಳಿಯ ತಗರೆಯಲ್ಲಿ ಸಕಲೇಶಪುರ- ಬೇಲೂರು ಮುಖ್ಯರಸ್ತೆ ತಡೆದು ದಿನವಿಡೀ ಪ್ರತಿಭಟನೆ ನಡೆಸಿದ್ದರಿಂದ ಅರೇಹಳ್ಳಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳಲು ಸಾಧ್ಯವಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನೆ ಮುಂದುವರಿದ ಪರಿಣಾಮ‌ ಕತ್ತಲಾಗುತ್ತಿದ್ದರೂ ಬಸ್ ಬಾರದೇ ವಿದ್ಯಾರ್ಥಿಗಳು ಆತಂಕಕ್ಕೀಡಾದರು.

ಕನ್ನಡಪ್ರಭ ವಾರ್ತೆ ಬೇಲೂರು

ಕಾಡಾನೆ ಹಾವಳಿಯಿಂದ ಬಸವಳಿದ ರೈತರು ಬೇಲೂರು ತಾಲೂಕು ಬಿಕ್ಕೋಡು ಹೋಬಳಿಯ ತಗರೆಯಲ್ಲಿ ಸಕಲೇಶಪುರ- ಬೇಲೂರು ಮುಖ್ಯರಸ್ತೆ ತಡೆದು ದಿನವಿಡೀ ಪ್ರತಿಭಟನೆ ನಡೆಸಿದ್ದರಿಂದ ಅರೇಹಳ್ಳಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳಲು ಸಾಧ್ಯವಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ರಸ್ತೆ ತಡೆ ವಿಚಾರ ತಿಳಿಯದ ವಿದ್ಯಾರ್ಥಿಗಳು ಬೆಳಗ್ಗೆ ಎಂದಿನಂತೆ ಶಾಲೆಗೆ ಬಂದಿದ್ದರು. ಪ್ರತಿಭಟನೆ ಮುಂದುವರಿದ ಪರಿಣಾಮ‌ ೪ ಗಂಟೆಗೆ ಬಸ್ ನಿಲ್ದಾಣದ ಬಳಿ ಬಂದ ವಿದ್ಯಾರ್ಥಿಗಳು ಏಳು ಗಂಟೆಯಾಗಿ ಕತ್ತಲಾಗುತ್ತಿದ್ದರೂ ಬಸ್ ಬಾರದೇ ಆತಂಕಕ್ಕೀಡಾದರು. ಬೇರೆ ಊರಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಸಹ ಸಮಸ್ಯೆ ಕುರಿತು ತಮ್ಮ ಸಂಬಂಧಿಕರಿಗೆ ಕರೆ ಮಾಡುತ್ತಿದ್ದರು. ಈ ವೇಳೆ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಚೈತನ್ಯ ಎಸ್.ಆರ್ ಮಾತನಾಡಿ, ನಾನು ಹಾಗೂ ಸ್ನೇಹಿತರು ಬಸ್ ನಿಲ್ದಾಣಕ್ಕೆ ಬಂದು ೨ ಗಂಟೆ ಕಳೆದರೂ ಒಂದೂ ಬಸ್ ಬಂದಿಲ್ಲ. ಕಾಡಾನೆಗಳ ಕಾಟದ ನಡುವೆ ಮನೆಗೆ ಹೋಗಲು ಭಯವಾಗುತ್ತದೆ. ಹಲವು ದಿನಗಳಿಂದ ಬಸ್ ಸಮಸ್ಯೆಯಿದ್ದು ಸರಿಯಾದ ಸಮಯಕ್ಕೆ ಶಾಲೆಗೆ ಬರಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರಿಯಾದ ಸಮಯಕ್ಕೆ ಬಸ್ ಸಂಚಾರದ ವ್ಯವಸ್ಥೆ ಮಾಡಿದರೆ ಎಲ್ಲರಿಗೂ ಅನುಕೂಲವಾಗುತ್ತದೆ ಎಂದರು.

ಈ ವೇಳೆ ವಿದ್ಯಾರ್ಥಿಗಳಾದ ವೈಭವ್, ತೇಜಸ್, ಸಹನಾ, ಪೃಥ್ವಿ ಸುವರ್ಣ, ಭವ್ಯ ಹಾಗೂ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಎಸ್‌ಡಿಎಲ್‌ನಿಂದ ₹400ನ ಮಲ್ಲಿಗೆ ಸೋಪ್‌!
ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಬಳಿ ಸರ್ಕಾರಿ ಶ್ರೀಗಂಧ ಮರ ಕತ್ತರಿಸಿದ ರೈತ!