ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಾಷ್ಟ್ರೀಯ ಹೆದ್ದಾರಿ ಬಿಬಿ ರಸ್ತೆ ಬದಿಯಲ್ಲಿರುವ ಜಡಲ ತಿಮ್ಮನಹಳ್ಳಿ ಸಂಪರ್ಕ ರಸ್ತೆ, ನಗರ ಪ್ರದೇಶ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಿಂದ ಕಂದವಾರಕ್ಕೆ ಹೋಗುವ ಹೋಗುವ ರಸ್ತೆ, ಮುಸ್ಟೂರು ರಸ್ತೆ,ಅಂದಾರ್ಲಹಳ್ಳಿ ಪಟ್ರೇನಹಳ್ಳಿ ರಸ್ತೆ, ನಗರ ವ್ಯಾಪ್ತಿ ತಗುಪ್ರದೇಶ ಹೀಗೆ ಅನೇಕ ಕಡೆಗಳಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು ಇದೀಗ ಮಳೆಯ ಪರಿಣಾಮ ಗುಂಡಿಗಳಲ್ಲಿ ವ್ಯಾಪಕವಾಗಿ ನೀರು ತುಂಬಿ ಕೆರೆ ಗದ್ದೆಗಳಾಗಿ ಪರಿಣಮಿಸಿದೆ.
ರಸ್ತೆಗಳ ದುರಸ್ತಿಗೆ ಒತ್ತಾಯಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬಿಬಿ ರಸ್ತೆ ಬದಿಯಲ್ಲಿರುವ ಜಡಲ ತಿಮ್ಮನಹಳ್ಳಿ ಸಂಪರ್ಕ ರಸ್ತೆಯು ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಜನ್ಮ ಸ್ಥಳ ಮುದ್ದೇನಹಳ್ಳಿ, ಸತ್ಯಸಾಯಿ ಗ್ರಾಮದ ಉಚಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ,ನಂದಿಯ ಐತಿಹಾಸಿಕ ಭೋಗ ನಂದಿಶ್ವರ ದೇವಾಲಯ, ನಂದಿಗಿರಿಧಾಮ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಪ್ರತಿನಿತ್ಯ ರೋಗಿಗಳು, ದೇಶ-ವಿದೇಶಗಳ ಪ್ರವಾಸಿಗರು ಪ್ರಯಾಣಿಸುತ್ತಾರೆ. ಈ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ಇಷ್ಟೆಲ್ಲ ಅದ್ವಾನವಾಗಿದ್ದರೂ ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸ್ಥಳೀಯ ಆಡಳಿತ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಚುನಾಯಿತ ಜನಪ್ರತಿನಿಧಿಗಳು ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುಂತೆ ವರ್ತಿಸುತ್ತಿದ್ದಾರೆಂದು ನಾಗರಿಕರು ಆರೋಪಿಸಿದ್ದಾರೆ