ಕನ್ನಡಪ್ರಭ ವಾರ್ತೆ ನಾಗಮಂಗಲ
ಆದಿಚುಂಚನಗಿರಿ ಶ್ರೀಮಠಕ್ಕೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಇಂತಹ ಧಾರ್ಮಿಕ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಉತ್ತಮವಾಗಿರಬೇಕೆಂಬ ಉದ್ದೇಶದಿಂದ 1ಕೋಟಿ ರು. ವೆಚ್ಚದಲ್ಲಿ ಮರುಡಾಂಬಕರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಯಾವುದೇ ಕಾಮಗಾರಿಯಾಗಲಿ ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಬಹಳ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು. ಕಳಪೆ ಗುಣಮಟ್ಟ ಕಂಡುಬಂದಲ್ಲಿ ಸಹಿಸುವುದಿಲ್ಲ. ಮುಂದಿನ ಎರಡು ವರ್ಷದಲ್ಲಿ ತಾಲೂಕಿನ ಹಲವೆಡೆ ಶಿಥಿಲಗೊಂಡಿರುವ ಬಹುತೇಕ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದರು.ಈ ಮಾರ್ಗದಲ್ಲಿ ಮರುಡಾಂಬರೀಕರಣದ ಜೊತೆಗೆ ಎರಡೂ ಬದಿಯಲ್ಲಿ ಹೊಸದಾಗಿ ಚರಂಡಿ ನಿರ್ಮಾಣವಾಗಬೇಕೆಂದು ಪ್ರಸನ್ನನಾಥ ಸ್ವಾಮೀಜಿ ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶೀಘ್ರದಲ್ಲಿಯೇ ರಸ್ತೆಬದಿಯಲ್ಲಿ ಚರಂಡಿ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸುವಂತೆ ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಸಚಿವರ ಪುತ್ರ ಸಚ್ಚಿನ್ ಚಲುವರಾಯಸ್ವಾಮಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ಲೋಕೋಪಯೋಗಿ ಇಲಾಖೆಯ ಎಇಇ ನಿಂಗರಾಜು, ಎಇ ಇಮ್ರನ್ಖಾನ್, ಮುಖಂಡರಾದ ತಿಮ್ಮರಾಯಿಗೌಡ, ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ಕೆ.ವಿ.ದಿನೇಶ್, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.