ಹಿರೇಕೆರೂರು: ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರೂ ಶಿಕ್ಷಣವಂತರಾಗಿ, ಮಾದರಿ ವ್ಯಕ್ತಿತ್ವ ರೂಪಿಸಿಕೊಂಡು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.ತಾಲೂಕಿನ ನೂಲಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ 2021- 22ನೇ ಸಾಲಿನ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಯೋಜನೆ ಅಡಿಯಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವಿದ್ಯಾರ್ಥಿಗಳ ಸುಗಮ ಕಲಿಕೆ ಪೂರಕವಾಗುವಂತೆ ನೂತನ ಯೋಜನೆಗಳು ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ನೀಡಿ ಉತ್ತಮ ಕಲಿಕಾ ವಾತಾವರಣ ರೂಪಿಸುವ ಕಾರ್ಯ ಮಾಡುತ್ತಿದೆ.
ಹಾವೇರಿ: 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ವಿಮೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೇ ವಿಮಾ ಸಂಸ್ಥೆಯವರಿಂದ ತಿರಸ್ಕೃತಗೊಂಡಿದ್ದ ಪ್ರಸ್ತಾವನೆಗಳನ್ನು ಮರು ಪರಿಶೀಲನೆಗಾಗಿ ತಾಲೂಕು ಮಟ್ಟದ ಸಮಿತಿ ಸಭೆಯಲ್ಲಿ ಸಿಂಧು ಎಂದು ಪರಿಗಣಿಸಲು ಅಗತ್ಯ ದಾಖಲೆಗಳನ್ನು ರೈತರು ಸಲ್ಲಿಸಬೇಕು ಎಂದು ಹಾವೇರಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.ವಿಮಾ ಸಂಸ್ಥೆಯಿಂದ ತಿರಸ್ಕೃತ ರೈತರ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ತಿರಸ್ಕೃತ ರೈತರು 2023- 24ರ ತಮ್ಮ ಪಹಣಿಯಲ್ಲಿ ವಿಮೆಗೆ ನೋಂದಾಯಿಸಿದ ಬೆಳೆ ದಾಖಲಾಗಿದ್ದರೆ, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಶೀದಿ ಅಥವಾ ವಿಮೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಕೃಷಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಲ್ಲಿ ಅಂತಹ ದಾಖಲೆ ಹಾಗೂ ಬೆಳೆವಿಮೆಗೆ ನೋಂದಾಯಿಸಿದ ಬೆಳೆಗೆ ಸಂಬಂಧಿಸಿದಂತೆ ಇನ್ನಿತರ ದಾಖಲೆಗಳನ್ನು 15 ದಿನಗಳೊಳಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳ ಮುಖಾಂತರ ಸಮಿತಿಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.