ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಮಾಧ್ಯಮ ಪಾತ್ರ ಪ್ರಮುಖ: ಮುಖ್ಯಾಧಿಕಾರಿ ಮತ್ತಡಿ

KannadaprabhaNewsNetwork | Published : Nov 13, 2024 12:03 AM

ಅವರು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಹಿದಾಯ ಫೌಂಡೇಶನ್, ಯು.ಆರ್. ಫೌಂಡೇಶನ್ ಮಂಗಳೂರು, ಆಧಾರ್ ಸೇವಾ ಕೇಂದ್ರ ಇವುಗಳ ಆಶ್ರಯದಲ್ಲಿ ತೊಕ್ಕೊಟ್ಟುವಿನ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಆಧಾರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಳ್ಳಾಲ

ದೇಶದಲ್ಲಿ ಮಾಧ್ಯಮ ರಂಗ ಬಲಿಷ್ಠ ಅಂಗವಾಗಿದೆ. ಪತ್ರಕರ್ತರು ಜನರ ಸಮಸ್ಯೆಗಳ ಬಗ್ಗೆ ಸಮಾಜಕ್ಕೆ, ಆಡಳಿತ ವ್ಯವಸ್ಥೆಗೆ ಮುಟ್ಟಿಸುವಲ್ಲಿ ಬೆಳಕು ಚೆಲ್ಲುವ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಉಳ್ಳಾಲದ ಪತ್ರಕರ್ತರ ಸಂಘ ವಿಶಿಷ್ಟವಾಗಿ ಸೇವಾ ಚಟುವಟಿಕೆಯಲ್ಲಿ ಇತರೆ ಸೇವಾ ಸಂಸ್ಥೆಗಳ ಜೊತೆಗೆ ಭಾಗಿಯಾಗುವ ಮೂಲಕ ಮಾದರಿಯಾಗಿದೆ ಎಂದು ಸೋಮೇಶ್ವರ ಪುರಸಭೆ ಹಾಗೂ ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ಮತ್ತಡಿ ಅಭಿಪ್ರಾಯಪಟ್ಟರು.

ಅವರು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಹಿದಾಯ ಫೌಂಡೇಶನ್, ಯು.ಆರ್. ಫೌಂಡೇಶನ್ ಮಂಗಳೂರು, ಆಧಾರ್ ಸೇವಾ ಕೇಂದ್ರ ಇವುಗಳ ಆಶ್ರಯದಲ್ಲಿ ತೊಕ್ಕೊಟ್ಟುವಿನ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಆಧಾರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿದಾಯ ಫೌಂಡೇಶನ್‌ನ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿ, ಪತ್ರಕರ್ತರ ಸಂಘ ನಡೆಸುವ ಸಮಾಜಮುಖಿ ಕಾರ್ಯಕ್ರಮದಿಂದ ಗೌರವ ಹೆಚ್ಚಾಗುತ್ತದೆ. ಪ್ರತಿ ತಾಲೂಕು, ಪ್ರತಿ ಸಂಘದಲ್ಲಿ ಸಮಾಜಮುಖಿ ಕಾರ್ಯಕ್ರಮಗಳಾಗಬೇಕು ಎಂದರು.

ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್. ಕೊಣಾಜೆ ಮಾತನಾಡಿದರು. ಹಿದಾಯ ಫೌಂಡೇಷನ್ ಯೂತ್ ವಿಂಗ್ ಉಪಾಧ್ಯಕ್ಷ ಆಶೀಕ್‌ ಕುಕ್ಕಾಜೆ ಮಾತನಾಡಿದರು.

ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು ಅವರನ್ನು ಗೌರವಿಸಲಾಯಿತು. ಯು.ಆರ್. ಫೌಂಡೇಶನ್ ನ ಅಧ್ಯಕ್ಷ ಉಸ್ಮಾನ್ ಎ.ಎಂ , ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮೋಹನ್ ಕುತ್ತಾರ್, ಸಂಘದ ಉಪಾಧ್ಯಕ್ಷ ದಿನೇಶ್ ನಾಯಕ್ ತೊಕ್ಕೊಟ್ಟು, ಆರೀಫ್ ಯು.ಆರ್., ಯು.ಆರ್. ಫೌಂಡೇಷನ್‌ ಸದಸ್ಯ ಸಫ್ವಾನ್ ಯು.ಆರ್, ಆಧಾರ್ ಸೇವಾ ಕೇಂದ್ರದ ಸಿಬ್ಬಂದಿ ಚೈತ್ರಾ, ಯೋಗಿಣಿ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಶಶಿಧರ್ ಪೊಯ್ಯತ್ತಬೈಲ್ ಸ್ವಾಗತಿಸಿ ನಿರೂಪಿಸಿದರು. ಕಾರ್ಯದರ್ಶಿ ವಜ್ರ ಗುಜರನ್ ವಂದಿಸಿದರು.