ಕನ್ನಡಪ್ರಭ ವಾರ್ತೆ ಕೆಜಿಎಫ್
ನಗರದ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆ ಹಾಗೂ ಲಂಚ ನಿಷೇಧ ಕಾಯ್ದೆ ಬಗ್ಗೆ ‘ಕಾನೂನು ಅರಿವು- ನೆರವು’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಡೀ ಜಗತ್ತಿನಲ್ಲಿ ನಮ್ಮ ದೇಶ ಭ್ರಷ್ಟಾಚಾರದಲ್ಲಿ ೭೮ನೇ ಸ್ಥಾನದಲ್ಲಿದ್ದು, ಭ್ರಷ್ಟಾಚಾರ ಈ ಮಟ್ಟಕ್ಕೆ ಹೆಚ್ಚಾಗಲು ಕಾರಣ ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಭ್ರಷ್ಟಾಚಾರ ಹೆಚ್ಚಾಗುವಲ್ಲಿ ಸಾರ್ವಜನಿಕರ ಪಾತ್ರ ಏನು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾಗಿದೆ ಎಂದರು.ಭ್ರಷ್ಟಾಚಾರ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಮಹತ್ತರವಾದುದಾಗಿದೆ. ನಾನು ಲಂಚವನ್ನು ಕೊಡುವುದಿಲ್ಲ, ನನ್ನ ಕೆಲಸ ಎಷ್ಟು ದಿವಸ ಬೇಕಾದರೂ ವಿಳಂಬವಾಗಲಿ ಪರವಾಗಿಲ್ಲ, ಸಂಬಂಧಪಟ್ಟ ಅಧಿಕಾರಿಗಳು ಅಥವಾ ನೌಕರರು ಒಂದು ವೇಳೆ ಬೇಕಾದಲ್ಲಿ ನನ್ನ ಅರ್ಜಿ ತಿರಸ್ಕರಿಸಲಿ ಎನ್ನುವ ನಿರ್ಧಾರಕ್ಕೆ ಸಾರ್ವಜನಿಕರು ಬಂದಲ್ಲಿ ಅಲ್ಲಿಂದಲೇ ಬದಲಾವಣೆಯ ಪರ್ವ ಪ್ರಾರಂಭವಾಗುತ್ತದೆ ಎಂದರು.
ಪೊಲೀಸ್ ಠಾಣೆಗಳಲ್ಲಿ ದೂರನ್ನು ನೀಡಲು ಹೋದಾಗ ಅದನ್ನು ಪೊಲೀಸರು ನಿರಾಕರಿಸುವಂತಿಲ್ಲ, ಒಂದು ವೇಳೆ ದೂರನ್ನು ದಾಖಲಿಸಿಕೊಳ್ಳಲು ನಿರಾಕರಿಸಿದಲ್ಲಿ ನೋಂದಾಯಿತ ಅಂಚೆ ಮೂಲಕ ದೂರನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರನ್ನು ಕಳುಹಿಸಬಹುದು. ಇಲ್ಲವೇ ಪೊಲೀಸ್ ವರಿಷ್ಠಾಧಿಕಾರಿಗಳಿಗಾಗಲೀ, ಐಜಿಪಿ ರವರಿಗಾಗಲೀ ದೂರನ್ನು ಸಲ್ಲಿಸಬಹುದು. ಇದ್ಯಾವುದೂ ಇಲ್ಲವಾದಲ್ಲಿ ನ್ಯಾಯಾಲಯದಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿ ಮೇಲೆ ಖಾಸಗಿ ದೂರನ್ನು ದಾಖಲಿಸಬಹುದಾಗಿದ್ದು, ಈ ತಿಳುವಳಿಕೆಯನ್ನು ಸಮಾಜದಲ್ಲಿನ ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದರು.
ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗಳಿಗೆ ಹೋದಾಗ ಅಲ್ಲಿ ವೈದ್ಯರು ನಿಮ್ಮ ಖಾಯಿಲೆಗೆ ಸಂಬಂಧಿಸಿದ ಔಷಧಿಗಳು ಆಸ್ಪತ್ರೆಯಲ್ಲಿ ಲಭ್ಯವಿಲ್ಲ, ಹೊರಗೆ ಮೆಡಿಕಲ್ ಶಾಪ್ಗಳಲ್ಲಿ ತೆಗೆದುಕೊಳ್ಳಿ ಎಂದು ಚೀಟಿಯನ್ನು ಬರೆದುಕೊಡುವಂತಿಲ್ಲ. ವಾಸ್ತವವಾಗಿ ಖಾಸಗಿ ಅಂಗಡಿಗಳಲ್ಲಿ ದೊರೆಯುವ ಔಷಧಿಗಳಿಗಿಂತಲೂ ಅತಿ ಹೆಚ್ಚಿನ ಗುಣಮಟ್ಟದ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.ನ್ಯಾಯಾಧೀಶರಾದ ಮುಜಫರ್ ಎ ಮಾಂಜರಿ ಮಂಜು, ಪೌರಾಯುಕ್ತ ಪವನ್ಕುಮಾರ್, ವಕೀಲರ ಸಂಘದ ತಾಲೂಕು ಅಧ್ಯಕ್ಷ ರಾಜಗೋಪಾಲಗೌಡ, ನಗರಸಭೆ ವ್ಯವಸ್ಥಾಪಕ ಶಶಿಕುಮಾರ್, ಮಣಿವಣ್ಣನ್ ಇದ್ದರು.