ಕಾಮಗಾರಿ ವೇಳೆ ಟಿಎಪಿಸಿಎಂಎಸ್‌ ಕಟ್ಟಡ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ

KannadaprabhaNewsNetwork |  
Published : Nov 21, 2024, 01:04 AM IST
ಕಾಮಗಾರಿ ಕೆಲಸದ ವೇಳೆ ಕುಸಿದು ಬಿದ್ದಿರುವ ಮೇಲ್ಚಾವಣಿ | Kannada Prabha

ಸಾರಾಂಶ

ಕಟ್ಟಡ ಕಾಮಗಾರಿ ವೇಳೆ ಮೇಲ್ಚಾವಣಿ ಕುಸಿದುಬಿದ್ದಿರುವುದು.

ಕನ್ನಡಪ್ರಭ ವಾರ್ತೆ ಚನ್ನಗಿರಿ

ಪಟ್ಟಣದ ಕಗತೂರು ರಸ್ತೆಯಲ್ಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಮುಂಭಾಗ ನಿರ್ಮಿಸುತ್ತಿರುವ ಸಂಘದ ಕಟ್ಟಡದ ಮೇಲ್ಚಾವಣಿ ಕುಸಿದು, ರಿಯಾನ್ (22), ಅಮಾನ್ (24) ಎಂಬಿಬ್ಬರು ಗಾಯಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಗಾಯಾಳು ಕಾರ್ಮಿಕರಿಗೆ ಚನ್ನಗಿರಿ ಆಸ್ಪತ್ರೆಯಲ್ಲಿ ಪ್ರಾರ್ಥಿಕ ಚಿಕಿತ್ಸೆ ಕೊಡಿಸಲಾಗಿದೆ. ಒಬ್ಬ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಲಾಗಿದೆ.

ಸಂಘಕ್ಕೆ ಸಂಬಂಧಪಟ್ಟ ಕಟ್ಟಡ ನಿರ್ಮಾಣದ ಕಾಮಗಾರಿ ಕೆಲಸದ ಅಂದಾಜು ವೆಚ್ಚ, ಗುತ್ತಿಗೆದಾರರ ಮಾಹಿತಿಯನ್ನು ಪಡೆಯಲು ಸೊಸೈಟಿ ಅಧ್ಯಕ್ಷ ಮತ್ತು ಕಾರ್ಯದರ್ಶಿ ಅವರಿಗೆ ದೂರವಾಣಿ ಕರೆ ಮಾಡಿದರೂ ಸರಿಯಾದ ಮಾಹಿತಿಯನ್ನು ನೀಡಲು ಸ್ಪಂದಿಸಲಿಲ್ಲ.

ಕಟ್ಟಡ ನಿರ್ಮಾಣದ ಕಾಮಗಾರಿ ಬಗ್ಗೆ ಇಲ್ಲಿನ ಪುರಸಭೆ ಅಧಿಕಾರಿಗಳನ್ನು ವಿಚಾರಿಸಿದಾಗ, ಈ ಕಟ್ಟಡ ನಿರ್ಮಾಣಕ್ಕೆ 2023ರಲ್ಲಿ ಪರವಾನಗಿ ನೀಡಬೇಕು ಎಂದು ಸಂಘದಿಂದ ಪುರಸಭೆಗೆ ಅರ್ಜಿ ಸಲ್ಲಿಸಿದ್ದರು. ಸಮರ್ಪಕ ದಾಖಲಾತಿ ಇಲ್ಲದ ಕಾರಣ ಪರವಾನಗಿ ನೀಡಿರಲಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ