ರೂಟ್‌ ಕೆನಾಲ್‌ಗೂ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ

KannadaprabhaNewsNetwork |  
Published : Apr 10, 2026, 01:30 AM IST
9ಎಚ್ಎಸ್ಎನ್7 : ಮಾಜಿ ಧರ್ಮದರ್ಶಿ ಯು.ಟಿ. ಕೇಶವಮೂರ್ತಿ | Kannada Prabha

ಸಾರಾಂಶ

ಸರ್ಕಾರಿ ಆಸ್ಪತ್ರೆಗಳಲ್ಲಿ ದಂತ ಆರೈಕೆ ಸೇವೆ ಉತ್ತಮಪಡಿಸುವ ಸಲುವಾಗಿ ‘ಆಯುಷ್ಮಾನ್ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ (ಪಿಎಂಜೆಎವೈ ಮತ್ತು ಸಿಎಂ ಎಆರ್‌ಕೆ) ಯೋಜನೆಯಡಿ ರೂಟ್ ಕೆನಾಲ್ ಚಿಕಿತ್ಸೆಯನ್ನೂ (ಆರ್‌ಸಿಟಿ) ಸೇರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ದಂತ ಆರೈಕೆ ಸೇವೆ ಉತ್ತಮಪಡಿಸುವ ಸಲುವಾಗಿ ‘ಆಯುಷ್ಮಾನ್ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ (ಪಿಎಂಜೆಎವೈ ಮತ್ತು ಸಿಎಂ ಎಆರ್‌ಕೆ) ಯೋಜನೆಯಡಿ ರೂಟ್ ಕೆನಾಲ್ ಚಿಕಿತ್ಸೆಯನ್ನೂ (ಆರ್‌ಸಿಟಿ) ಸೇರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.

ಹಲ್ಲಿನ ತಿರುಳಿನ ಸೋಂಕು ಅಥವಾ ಉರಿಯೂತಕ್ಕೆ ಚಿಕಿತ್ಸೆ ನೀಡಲು ರೂಟ್ ಕೆನಾಲ್ ಚಿಕಿತ್ಸೆ ಮಾಡಲಾಗುತ್ತದೆ. ಚಿಕಿತ್ಸೆ ನೀಡದೆ ಬಿಟ್ಟರೆ, ಸೋಂಕು ಸುತ್ತಮುತ್ತಲಿನ ಅಂಗಾಂಶಗಳಿಗೆ ಹರಡಿ, ಇತರೆ ಹಲ್ಲುಗಳಿಗೂ ಹಾನಿಯಾಗಬಹುದು. ಆದರೆ ಹೆಚ್ಚಿನ ಚಿಕಿತ್ಸಾ ವೆಚ್ಚ ಮತ್ತು ಜಾಗೃತಿ ಕೊರತೆಯಿಂದಾಗಿ ಹೆಚ್ಚಿನ ಜನ ರೂಟ್ ಕೆನಾಲ್ ಬದಲಿಗೆ ದಂತ ತೆಗೆಯುವ ವಿಧಾನವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.ಹೀಗಾಗಿ, ಆರೋಗ್ಯ ಕರ್ನಾಟಕ ಯೋಜನೆಯಡಿ ಇದನ್ನು ಸೇರಿಸುವುದರಿಂದ ಬಡವರಿಗೆ ಅನುಕೂಲವಾಗಲಿದೆ. ಜತೆಗೆ, ಹಲ್ಲಿನ ಸಂರಕ್ಷಣೆಯನ್ನು ಉತ್ತೇಜಿಸಿದಂತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಆದೇಶದ ಎರಡು ವಿಭಾಗಗಳನ್ನು ಒಳಗೊಂಡಿದ್ದು, ಮುಂಭಾಗದ ಹಲ್ಲುಗಳು ಮತ್ತು ಹಿಂಭಾಗದ ಹಲ್ಲುಗಳಿಗೆ ರೂಟ್ ಕೆನಾಲ್ ಚಿಕಿತ್ಸೆ ನೀಡುವುದನ್ನು ಸಂಕೀರ್ಣ ದ್ವಿತೀಯ ಕಾರ್ಯವಿಧಾನ (2ಬಿ)ಎಂದು ವರ್ಗೀಕರಿಸಲಾಗಿದೆ.

ಯೋಜನೆ ಜಾರಿಗೆ ನೋಡಲ್ ಏಜೆನ್ಸಿಯಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಜವಾಬ್ದಾರಿ ನೀಡಿದ್ದು, ಪ್ಯಾಕೇಜ್ ದರವನ್ನು ಮುಂಭಾಗದ ಹಲ್ಲುಗಳಿಗೆ 1,360 ರು. ಮತ್ತು ಹಿಂಭಾಗದ ಹಲ್ಲುಗಳಿಗೆ 2,040 ರು. ಎಂದು ನಿಗದಿಪಡಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಝೂಂಬಿ ಡ್ರಗ್ಸ್ ಬಗ್ಗೆ ಸುಳ್ಳು ಸುದ್ದಿಹರಡಿದರೆ ಕ್ರಮ: ಸಿಂಗ್ ಎಚ್ಚರಿಕೆ
ಖಾಸಗಿ ಗೋದಾಮಿಗೆ ಬೆಂಕಿ:ಕೊಟ್ಯಂತರ ರು. ವಸ್ತು ಭಸ್ಮ