ರೋಟರಿ ಕ್ಲಬ್‌ನಿಂದ ಪತ್ರಿಕಾ ದಿನಾಚರಣೆ

KannadaprabhaNewsNetwork |  
Published : Aug 08, 2025, 01:01 AM IST
ಸ | Kannada Prabha

ಸಾರಾಂಶ

ರೋಟರಿ ಕ್ಲಬ್ ಶೈಕ್ಷಣಿಕ, ಆರೋಗ್ಯ, ಕ್ರೀಡೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿದೆ

ಹೊನ್ನಾವರ: ಪಟ್ಟಣದ ರೋಟರಿ ಸಭಾಭವನದಲ್ಲಿ ತಾಲೂಕಿನ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಜರುಗಿತು.

ರೋಟರಿ ಕ್ಲಬ್ ಅಧ್ಯಕ್ಷ ಡಾ.ರಾಜು ಮಾಳಗಿಮನಿ ಮಾತನಾಡಿ, ರೋಟರಿ ಕ್ಲಬ್ ಶೈಕ್ಷಣಿಕ, ಆರೋಗ್ಯ, ಕ್ರೀಡೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿದೆ. ನಾವು ಆಯೋಜಿಸುವ ಎಲ್ಲ ಕಾರ್ಯಕ್ರಮವನ್ನು ಜನರಿಗೆ ತಲುಪಿಸುವ ಕಾರ್ಯ ಪತ್ರಕರ್ತರು ಮಾಡುತ್ತಿದ್ದಾರೆ. ಪ್ರತಿವರ್ಷದಂತೆ ಎಲ್ಲ ಪತ್ರಕರ್ತರನ್ನು ಆಮಂತ್ರಿಸಿ ಅವರ ಸೇವೆ ಗುರುತಿಸುವ ಕಾರ್ಯ ರೋಟರಿ ಕ್ಲಬ್ ಮಾಡುತ್ತಾ ಬಂದಿದೆ ಎಂದರು.

ಹಿರಿಯ ಪತ್ರಕರ್ತ ಜಿ.ಯು.ಭಟ್ ಮಾತನಾಡಿ, ಹಿರಿಯರು ಆರಂಭಿಸಿದ ಹೊನ್ನಾವರ ರೋಟರಿ ಗೌರವವನ್ನು ಇಂದಿಗೂ ಉಳಿಸಿಕೊಂಡಿದೆ. ಒಂದು ಸಂಸ್ಥೆ ಏನೆಲ್ಲ ಸಮಾಜಮುಖಿ ಕಾರ್ಯ ಮಾಡಬಹುದು ಎನ್ನುವುದಕ್ಕೆ ರೋಟರಿ ಮಾದರಿಯಾಗಿದೆ. ದೇಶದ ಎಲ್ಲ ರಂಗಗಳು ಇಂದು ನೈತಿಕ ಶಕ್ತಿ ಕಡಿಮೆಯಾಗುತ್ತಿದೆ. ನೈತಿಕ ಪುನರುತ್ತಾನದ ಕಾರ್ಯವಾಗಬೇಕಿದೆ ಎಂದು ರೋಟರಿಯೊಂದಿಗಿನ ಒಡನಾಟವನ್ನು ಸ್ಮರಿಸಿದರು.

ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಸತೀತ ತಾಂಡೇಲ್ ಮಾತನಾಡಿ, ಸಮಾಜಮುಖಿ ಅನೇಕ ಕಾರ್ಯದ ಮೂಲಕ ಜನಮನ್ನಣೆ ಪಡೆದಿರುವ ಹೊನ್ನಾವರ ರೋಟರಿ ಕ್ಲಬ್ ಪ್ರತಿ ವರ್ಷವು ಪತ್ರಿಕಾ ದಿನಾಚರಣೆಯ ಮೂಲಕ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸುವ ಕಾರ್ಯ ಮಾಡುತ್ತಿದೆ. ಪತ್ರಕರ್ತರು ಹಾಗೂ ರೋಟರಿ ಕ್ಲಬ್ ನಡುವೆ ಅವಿನಾಭಾವ ಸಂಂಬಂಧವಿದೆ. ಸಮಾಜಮುಖಿ ಕಾರ್ಯದ ಮೂಲಕ ಒಳ್ಳೆಯ ಸಂದೇಶ ನೀಡುತ್ತಾ ಬಂದಿದ್ದಾರೆ ಎಂದು ಸೇವಾ ಕಾರ್ಯದ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಇವೆಂಟ್ ಚೇರಮನ್ ನಾರಾಯಣ ಯಾಜಿ ರೋಟರಿ ಕ್ಲಬ್ ಹಾಗೂ ಪತ್ರಿಕಾ ದಿನಾಚರಣೆಯ ಕುರಿತು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಹೆನ್ರಿ ಲಿಮಾ, ಖಜಾಂಚಿ ಸುಹಾನ್ ಹೊರ್ಟಾ, ರೋಟರಿ ಸದಸ್ಯರು, ಪತ್ರಕರ್ತರು ಇದ್ದರು. ದಿನೇಶ ಕಾಮತ್ ಕಾರ್ಯಕ್ರಮ ನಿರ್ವಹಿಸಿದರು.

PREV

Recommended Stories

ಸರ್ಕಾರಿ ನೌಕರರ ಸೊಸೈಟಿಗೆ 50.58 ಲಕ್ಷ ಲಾಭ
ಡಿಸಿಸಿ ಬ್ಯಾಂಕ್‌ಗೆ ಅಣ್ಣಾಸಾಹೇಬ್ ಜೊಲ್ಲೆ ಆಯ್ಕೆ ನಿಶ್ಚಿತ