ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಕಾರ್ಯ ಸ್ತುತ್ಯಾರ್ಹ

KannadaprabhaNewsNetwork |  
Published : Apr 28, 2026, 01:45 AM IST
ನೇಕಾರ ಕಾಲನಿಯ ಹ್ಯಾಪಿ ಸ್ಕೂಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಹಾಗೂ ಸ್ವರ್ಣ ಸಮೂಹ ಸಂಸ್ಥೆಯಿಂದ ರೂಪಿಸಿದ್ದ ಮೂರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಡಾ. ವಿ.ಎಸ್‌.ವಿ. ಪ್ರಸಾದ್ ಚಾಲನೆ ನೀಡಿದರು. | Kannada Prabha

ಸಾರಾಂಶ

ಭವ್ಯ ಭಾರತದ ಪ್ರತಿಭಾನ್ವಿತ ನಾಗರಿಕರನ್ನು ನಿರ್ಮಿಸುವ ಶಾಲಾಭಿವೃದ್ಧಿ ಕಾರ್ಯದಲ್ಲಿ ತೊಡಗಿರುವ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಕಾರ್ಯ ಸ್ತುತ್ಯಾರ್ಹವಾಗಿದೆ.

ಹುಬ್ಬಳ್ಳಿ:

ಭವ್ಯ ಭಾರತದ ಪ್ರತಿಭಾನ್ವಿತ ನಾಗರಿಕರನ್ನು ನಿರ್ಮಿಸುವ ಶಾಲಾಭಿವೃದ್ಧಿ ಕಾರ್ಯದಲ್ಲಿ ತೊಡಗಿರುವ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದು ಸ್ವರ್ಣ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಹಾಗೂ ರೋಟೇರೇಯನ್‌ ಡಾ. ವಿ.ಎಸ್‍.ವಿ. ಪ್ರಸಾದ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾನಗರದ ನೇಕಾರ ಕಾಲನಿಯ ಹ್ಯಾಪಿ ಸ್ಕೂಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಹಾಗೂ ಸ್ವರ್ಣ ಸಮೂಹ ಸಂಸ್ಥೆಯಿಂದ ರೂಪಿಸಿದ್ದ ಮೂರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸ್ವರ್ಣ ಸಂಸ್ಥೆಯಿಂದ 2,000 ಚದರ ಅಡಿ ಪೇವರ್ಸ್ ಅಳವಡಿಕೆ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ದಾರಿ ಹಾಗೂ 2 ತರಗತಿ ಕೊಠಡಿಗೆ ಬಣ್ಣ, ಕಾರ್ಯಕ್ರಮ ನಡೆಯುವ ಜಾಗಕ್ಕೆ ಮಳೆ ಗಾಳಿ, ಬಿಸಿಲು ಬಡಿಯದಂತೆ ವೇದಿಕೆ ಮೇಲೆ ಹೊಸ ಶೆಡನ್ನ್ನು ನಮ್ಮ ಸಂಸ್ಥೆಯಿಂದ ನಿರ್ಮಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು, ಸಭೆ ಆಯೋಜಿಸಲು ಹಾಗೂ ಇತರ ಶಾಲಾ ಕಾರ್ಯಕ್ರಮಗಳಿಗೆ ಅನುಕೂಲಕರ ಮತ್ತು ಸುರಕ್ಷಿತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಸರ್ಕಾರಿ ಶಾಲೆಗಳಿಗೆ ಸರ್ಕಾರ ಸರಿಯಾಗಿ ಅನುದಾನ ನೀಡದಿರುವ ಸಂದರ್ಭದಲ್ಲಿ ರೋಟರಿ ಸಂಸ್ಥೆ ಮುಂದೆ ಬಂದು ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸುತ್ತಿರುವುದು ಸಾರ್ಥಕ ಸೇವೆಯಾಗಿದೆ. ಇಂಥ ಕಾರ್ಯಗಳಿಗೆ ನಾನೂ ಕೂಡ ನನ್ನ ಕೈಲಾದ ಸಹಾಯ-ಸಹಕಾರ ನೀಡಿದ್ದೇನೆ. ಮುಂದಿನ ದಿನಗಳಲ್ಲೂ ಕ್ಲಬ್‍ನ ಸಾಮಾಜಮುಖಿ ಕಾರ್ಯಗಳಿಗೆ ನಮ್ಮ ಸಂಸ್ಥೆಯಿಂದ ಸಹಕಾರ ನೀಡುವುದಾಗಿ ಭರವಸೆ ನೀಡಿದರು.3170 ಡಿಸ್ಟ್ರಿಕ್ಟ್ ಜಿಲ್ಲಾ ಗೌರ್ವನರ್ ಅರುಣ ಭಂಡಾರೆ ಮಾತನಾಡಿ , ನಗರದಲ್ಲಿ 10ಕ್ಕೂ ಹೆಚ್ಚು ಹಿರಿಯ ಕ್ಲಬ್‍ಗಳ ಜತೆಗೆ ಕಳೆದ 3-4 ವರ್ಷಗಳಿಂದ ಸಾಮಾಜ ಸೇವೆಯಲ್ಲಿ ರೋಟರಿ ಕ್ಲಬ್ ಹುಬ್ಬಳ್ಳಿ ಎಲೈಟ್ ತೊಡಗಿಕೊಂಡಿರಿವುದನ್ನು ಶ್ಲಾಘಿಸಿದರು.

ರೋಟೇರಿಯನ್ ರಾಧಿಕಾ ಗೋಖಲೆ, ಕ್ಲಬ್‍ ಅಧ್ಯಕ್ಷ ಅವಿನಾಶ ಕುರ್ತಕೋಟಿ, ಕಾರ್ಯದರ್ಶಿ ಅಂಬಾಪ್ರಸಾದ ಮಲ್ಯ, ಸ್ಕೂಲ್ ಚೇರ್‌ಮನ್ ಶರದ್ ಜಾಧವ, ಆರೂ ಗೌತಮಿ ಸೇರಿದಂತೆ ಕ್ಲಬ್‍ ಸದಸ್ಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದ ಯೋಜನೆ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಭೀಮಣ್ಣ ನಾಯ್ಕ
ಅಕ್ಟೋಬರ್‌-ನವೆಂಬರ್‌ನಲ್ಲಿ ವುಮೆನ್ಸ್ ಪ್ರೋ ಮಿನಿ ಫುಟ್‌ಬಾಲ್ ಲೀಗ್‌