ಕನ್ನಡಪ್ರಭ ವಾರ್ತೆ ಮಂಗಳೂರುರೋಟರಿ ಮಂಗಳೂರು ಸಿಟಿ ಕ್ಲಬ್ ಸಂಸ್ಥೆಯ ಪ್ರಾಯೋಜತ್ವದಲ್ಲಿ ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ ೩೧೮೧ರ ಆಡಳಿತ ಸಮಿತಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಪಿಲಿಕುಲ ಪ್ರದೇಶದಲ್ಲಿರುವ ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.ರೋಟರಿ ಜಿಲ್ಲೆ ೩೧೮೧ರ ಗವರ್ನರ್ ವಿಕ್ರಮ್ ದತ್ತ ಸಮಾವೇಶ ಉದ್ಘಾಟಿಸಿ, ಪ್ರಶಸ್ತಿ ವಿಜೇತರನ್ನು ಅಭಿನಂದಿಸಿ ಶುಭ ಕೋರಿದರು. ರೋಟರಿ ಜಿಲ್ಲೆ ೩೧೮೨ ಗವರ್ನರ್ ದೇವಾನಂದ್, ಮಾಜಿ ಗವರ್ನರ್ ರವೀಂದ್ರ ಭಟ್, ಲಯನ್ಸ್ ಜಿಲ್ಲಾ ಗವರ್ನಾರ್ ಸುಬ್ರಹ್ಮಣ್ಯ ಮುಖ್ಯ ಅತಿಥಿಗಳಾಗಿದ್ದರು. ಮಾಜಿ ಗವರ್ನರ್ ಅಲಗು ಅಲಗಪ್ಪ ದಿಕ್ಸೂಜಿ ಭಾಷಣ ಮಾಡಿದರು.
ರೋಟರಿ ಮಂಗಳೂರು ಸಿಟಿ ಸಂಸ್ಥೆಯು ನಗರದ ಲೇಡಿಗೋಶನ್ ಆಸ್ಪತ್ರೆಯ ಹೆರಿಗೆ ಮತ್ತು ನವಜಾತ ಶಿಶುಗಳ ವಿಭಾಗವನ್ನು ಆಧುನಿಕ ಶೈಲಿಯಲ್ಲಿ ಶ್ರೇಷ್ಠ ಮಟ್ಟಕ್ಕೆ ಪರಿವರ್ತಿಸಿ ನವೀಕರಿಸಿದ್ದು, ಕಿವುಡರಿಗೆ ಶ್ರವಣ ಯಂತ್ರೋಪರಣಗಳ ವಿತರಣೆ, ಶಾಲೆಗೆ ಮಳೆ ನೀರು ಕೊಯಿಲಿನ ಯಂತ್ರೋಪರಣಗಳ ಕೊಡುಗೆ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಅನಾಥ ಆಶ್ರಮಗಳಿಗೆ ಪೀಠೋಪರಣ ಮತ್ತು ವಿದ್ಯುತ್ ಉಪಕರಣಗಳ ಕೊಡುಗೆ ಇತ್ಯಾದಿ ಕಾರ್ಯಗಳನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.