ಕಾರವಾರದಲ್ಲಿ ನಾಳೆ ರೋಟರಿ ಮ್ಯಾರಥಾನ್

KannadaprabhaNewsNetwork |  
Published : Dec 13, 2025, 02:45 AM IST
ಪೋಸ್ಟರ್ ಬಿಡುಗಡೆ ಮಾಡಿದರು | Kannada Prabha

ಸಾರಾಂಶ

ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರವಾರದ ರೋಟರಿ ಕ್ಲಬ್ ವತಿಯಿಂದ ಸತತ ಆರನೇ ವರ್ಷದ ಮ್ಯಾರಥಾನ್‌ನ್ನು ಡಿ. 14ರಂದು ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಅಕ್ಷಯ ಪಾವಸ್ಕರ ತಿಳಿಸಿದರು.

ಕಾರವಾರ: ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರವಾರದ ರೋಟರಿ ಕ್ಲಬ್ ವತಿಯಿಂದ ಸತತ ಆರನೇ ವರ್ಷದ ಮ್ಯಾರಥಾನ್‌ನ್ನು ಡಿ. 14ರಂದು ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಅಕ್ಷಯ ಪಾವಸ್ಕರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮಾಲಾದೇವಿ ಮೈದಾನದಿಂದ ಬೆಳಗ್ಗೆ 6 ಗಂಟೆಗೆ ಈ ಓಟ ಆರಂಭವಾಗಲಿದ್ದು, ಮಕ್ಕಳು, ಯುವಕರು ಸೇರಿದಂತೆ ಹಿರಿಯ ನಾಗರಿಕರೂ ಭಾಗವಹಿಸಿ ಆರೋಗ್ಯ ಜಾಗೃತಿ ಮೂಡಿಸಲಿದ್ದಾರೆ.

ಮ್ಯಾರಥಾನ್‌ನಲ್ಲಿ 5 ಮತ್ತು 10 ಕಿಮೀನ ಎರಡು ಪ್ರಮುಖ ವಿಭಾಗಗಳಿರುತ್ತವೆ. ಓಟವು ಮಾಲಾದೇವಿ ಮೈದಾನದಿಂದ ಪ್ರಾರಂಭವಾಗಿ, ಕೋಡಿಬಾಗ್, ಸವಿತಾ ಹೋಟೆಲ್ ಮತ್ತು ಮಾಲಾದೇವಿ ರಸ್ತೆ ಮಾರ್ಗವಾಗಿ ಸಾಗಲಿದೆ. 16 ವರ್ಷದೊಳಗಿನ ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ವಿಶೇಷ ಒತ್ತು ನೀಡಲಾಗಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ 16 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ₹100 ಹಾಗೂ 16 ವರ್ಷ ಮೇಲ್ಪಟ್ಟವರಿಗೆ ₹200 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ಭಾಗವಹಿಸುವ ಪ್ರತಿಯೊಬ್ಬ ಸ್ಪರ್ಧಾಳಿಗೆ ಟಿ-ಶರ್ಟ್, ಕ್ಯಾಪ್, ಲಘು ಉಪಾಹಾರ ನೀಡಲಾಗುವುದು ಹಾಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಒಟ್ಟು ₹70,000 ಬಹುಮಾನ ನೀಡಲಾಗಿತ್ತು. ಆದರೆ, ಈ ಬಾರಿ ಸ್ಪರ್ಧಾಳುಗಳ ಉತ್ಸಾಹ ಹೆಚ್ಚಿಸಲು ಬಹುಮಾನದ ಮೊತ್ತ ಏರಿಕೆ ಮಾಡಲಾಗಿದೆ. ಈ ಬಾರಿ 8,000ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅಥವಾ ಸ್ಪಾಟ್ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದು. ನಗರಸಭೆಯ ಎದುರು ಆಫ್‌ಲೈನ್ ನೋಂದಣಿಗೂ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮ್ಯಾರಥಾನ್ ಕೇವಲ ಓಟಕ್ಕಷ್ಟೇ ಸೀಮಿತವಾಗಿಲ್ಲ. ಇದರಿಂದ ಸಂಗ್ರಹವಾಗುವ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಲಾಗುವುದು ಎಂದು ರೋಟರಿ ಕ್ಲಬ್ ತಿಳಿಸಿದೆ. ಮುಖ್ಯವಾಗಿ ವೈದ್ಯಕೀಯ ಶಿಬಿರಗಳು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಬೆಂಬಲ, ಬಡವರಿಗೆ ಸಹಾಯ ಮತ್ತು ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಈ ನಿಧಿಯನ್ನು ವಿನಿಯೋಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಖಜಾಂಚಿ ರತ್ನಾಕರ ಅಂಬಿಗ, ಧರ್ಮೇಶ ಥನ್ನಾ, ಜೀತೇಂದ್ರ ಥನ್ನಾ ಹಾಗೂ ಶಿವಾನಂದ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ