ಸಮಾಜ ಸೇವೆಗೆ ರೋಟರಿ ಸಂಸ್ಥೆ ಉತ್ತಮ: ಪೊತದಾರ

KannadaprabhaNewsNetwork |  
Published : Jul 16, 2024, 12:32 AM IST
ಜಮಖಂಡಿ ರೋಟರಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರವಿವಾರ ನಡೆಯಿತು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಜಮಖಂಡಿ: ರೋಟರಿ ಸಂಸ್ಥೆ ಸಮಾಜ ಸೇವೆಗೆ ಉತ್ತಮ ಅವಕಾಶ ಒದಗಿಸಿದೆ ಎಂದು ಬೆಳಗಾವಿಯ ಪಾಸ್ಟ್‌ ಡಿಸ್ಟ್ರಿಕ್ಟ್‌ ಗೌವರ್ನರ್‌ ಅವಿನಾಶ ಪೊತದಾರ ಅಭಿಪ್ರಾಯ ಪಟ್ಟರು.ನಗರದ ಪಂಚಮಸಾಲಿ ಸಮುದಾಯ ಭವನದಲ್ಲಿ ನಡೆದ ರೋಟರಿ ಕ್ಲಬ್‌ ಜಮಖಂಡಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ:

ರೋಟರಿ ಸಂಸ್ಥೆ ಸಮಾಜ ಸೇವೆಗೆ ಉತ್ತಮ ಅವಕಾಶ ಒದಗಿಸಿದೆ ಎಂದು ಬೆಳಗಾವಿಯ ಪಾಸ್ಟ್‌ ಡಿಸ್ಟ್ರಿಕ್ಟ್‌ ಗೌವರ್ನರ್‌ ಅವಿನಾಶ ಪೊತದಾರ ಅಭಿಪ್ರಾಯ ಪಟ್ಟರು.ನಗರದ ಪಂಚಮಸಾಲಿ ಸಮುದಾಯ ಭವನದಲ್ಲಿ ನಡೆದ ರೋಟರಿ ಕ್ಲಬ್‌ ಜಮಖಂಡಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪದಗ್ರಹಣ ಮಾಡಿದ ನೂತನ ಅಧ್ಯಕ್ಷರು ತಮ್ಮ ಪದಾಧಿಕಾರಿಗಳ ಕಾರ್ಯಕ್ಷಮತೆಗೆ ಅನುಗುಣವಾಗಿ ಅವರನ್ನು ಪ್ರೋತ್ಸಾಹಿಸಿ ಸೇವೆಯಲ್ಲಿ ತೊಡಗಿಸಬೇಕು ಎಂದು ಕಿವಿಮಾತು ಹೇಳಿದರು.

ಉತ್ತಮ ಅವಕಾಶವನ್ನು ರೋಟರಿ ಸಂಸ್ಥೆ ಒದಗಿಸಿದೆ ಒಂದೇ ವರ್ಷದ ಅಲ್ಪ ಸಮಯದಲ್ಲಿ ತಮಗೆ ಸಾಧ್ಯವಾದಷ್ಟು ಉತ್ತಮ ಕೆಲಸಗಳನ್ನು ಮಾಡುವ ಜವಾಬ್ದಾರಿ ಇದೆ. ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಉದಾಹರಣೆ ನೀಡಿ ಮಾತನಾಡಿದ ಅವರು ಅಸಾಧ್ಯವೆಂದು ಸುಮ್ಮನಾಗಬಾರದು ಸತತ ಪ್ರಯತ್ನ ಮತ್ತು ಪರಿಶ್ರಮದಿಂದ ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು.

ನೂತನ ಅಧ್ಯಕ್ಷರಾಗಿ ಕಿರಣ ಕುಮಾರ ದೇಸಾಯಿ, ಕಾರ್ಯದರ್ಶಿಯಾಗಿ ಮಲ್ಲಪ್ಪ ಬುಜರುಕ್‌, ಇನ್ನರ್‌ವ್ಹೀಲ್‌ನ ಅಧ್ಯಕ್ಷರಾಗಿ ಅಲಕಾ ಮಾಳಗಿ, ಕಾರ್ಯದರ್ಶಿಯಾಗಿ ಗಿರಿಜಾ ಮೈತ್ರಿ, ಅಧಿಕಾರ ವಹಿಸಿಕೊಂಡರು. ಬೆಳಗಾವಿಯ ಇನ್ನರ ವ್ಹೀಲ್‌ ಕ್ಲಬ್‌ನ ರೂಪಾ ಪೋತದಾರ ಮಹಿಳಾ ಪದಾಧಿಕಾರಿಗಳಿಗೆ ಪದಗ್ರಹಣ ಮಾಡಿಸಿದರು. ಡಾ.ಮಾಳೇಶ ಪೂಜಾರ, ಡಾ.ಜ್ಯೋತಿ ದೇವರೆಡ್ಡಿ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಇನ್ನರ್‌ವ್ಹೀಲ್‌ ಅಧ್ಯಕ್ಷೆ ಡಾ.ಅಶ್ವಿನಿ ಪೂಜಾರ ವರದಿ ವಾಚನ ಮಾಡಿದರು. ನೂತನ ಅಧ್ಯಕ್ಷರು ತಮ್ಮ ಅವಧಿಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳ ಬಗ್ಗೆ ವಿವರಿಸಿದರು. ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ