ವಾಸದ ಮನೆಗಳ ಹಕ್ಕುಪತ್ರಕ್ಕಾಗಿ ರೊಟ್ಟಿ ಬುತ್ತಿ ಪ್ರತಿಭಟನೆ

KannadaprabhaNewsNetwork |  
Published : Sep 19, 2026, 02:00 AM IST
ರೊಟ್ಟಿ ಬುತ್ತಿ ಕಟ್ಟಿಕೊಂಡು ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಮಹಿಳೆಯರು ಹಾಗೂ ಬಡ ಕಾರ್ಮಿಕರ ವಿನೂತನ ಪ್ರತಿಭಟನೆ ಅಧಿಕಾರಿಗಳ ಗಮನ ಸೆಳೆಯಿತು. | Kannada Prabha

ಸಾರಾಂಶ

ದಶಕಗಳಿಂದ ವಾಸವಿದ್ದರೂ ಮನೆಗಳ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿ ರಾಣಿಬೆನ್ನೂರು ತಾಲೂಕಿನ ಮಾಗೋಡು ಗ್ರಾಮದ ಬಳಿ ವಾಸಿಸುತ್ತಿರುವ ನೂರಾರು ಬಡ ಕುಟುಂಬಗಳ ಮಹಿಳೆಯರು ಹಾಗೂ ಕಾರ್ಮಿಕರು ಶುಕ್ರವಾರ ವಿನೂತನವಾಗಿ ರೊಟ್ಟಿ ಬುತ್ತಿ ಕಟ್ಟಿಕೊಂಡು ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.

ಹಾವೇರಿ: ದಶಕಗಳಿಂದ ವಾಸವಿದ್ದರೂ ಮನೆಗಳ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿ ರಾಣಿಬೆನ್ನೂರು ತಾಲೂಕಿನ ಮಾಗೋಡು ಗ್ರಾಮದ ಬಳಿ ವಾಸಿಸುತ್ತಿರುವ ನೂರಾರು ಬಡ ಕುಟುಂಬಗಳ ಮಹಿಳೆಯರು ಹಾಗೂ ಕಾರ್ಮಿಕರು ಶುಕ್ರವಾರ ವಿನೂತನವಾಗಿ ರೊಟ್ಟಿ ಬುತ್ತಿ ಕಟ್ಟಿಕೊಂಡು ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.

ಮಾಗೋಡು ಗ್ರಾಮದ ಬಳಿ ಗೋಮಾಳ ಜಾಗದಲ್ಲಿ ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ನೂರಾರು ಕುಟುಂಬಗಳು 40 ವರ್ಷಗಳಿಂದ ಇಲ್ಲಿ ವಾಸವಿದ್ದರೂ ಮನೆಗಳ ಹಕ್ಕುಪತ್ರ ದೊರೆತಿಲ್ಲ ಎಂದು ಅಳಲು ತೋಡಿಕೊಂಡರು. ಮನೆ ಪಟ್ಟಾ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ವಿವಿಧ ಕಾರಣಗಳನ್ನು ನೀಡಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ಮುಖಂಡ ಹನುಮಂತಪ್ಪ ಕಬ್ಬಾರ ಮಾತನಾಡಿ, ವಾಸಿಸುವವನೇ ಮನೆಯೊಡೆಯ ಎಂಬ ಆಶಯದಡಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ, ತಾವು ಹಲವು ವರ್ಷಗಳಿಂದ ವಾಸಿಸುತ್ತಿರುವ ಮನೆಗಳಿಗೆ ಇದುವರೆಗೂ ಹಕ್ಕುಪತ್ರ ನೀಡದಿರುವುದು ಬೇಸರದ ಸಂಗತಿ. ಆರನೇ ಗ್ಯಾರಂಟಿ, ಭೂ ಗ್ಯಾರಂಟಿ ಎಂದು ಹೇಳುವ ಸರ್ಕಾರ ನಮಗೂ ಭೂಮಿ ಹಾಗೂ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ಗೋಮಾಳ ಜಾಗದಲ್ಲಿ ವಾಸಿಸುತ್ತಿದ್ದೇವೆ ಎಂಬ ಕಾರಣ ಸೇರಿದಂತೆ ನೂರೆಂಟು ನೆಪಗಳನ್ನು ಹೇಳಿ ಹಕ್ಕುಪತ್ರ ನೀಡುತ್ತಿಲ್ಲ. ತಮ್ಮ ಬದುಕಿನ ಬಹುಭಾಗವನ್ನು ಇಲ್ಲಿಯೇ ಕಳೆದಿರುವ ಬಡ ಕುಟುಂಬಗಳಿಗೆ ಮನೆಗಳ ಕಾನೂನುಬದ್ಧ ಹಕ್ಕು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಹಕ್ಕುಪತ್ರ ದೊರೆಯುವವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸಲು ಸಿದ್ಧರಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತ ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದ್ಯಾಮವ್ವ ಲಿಂಗದಹಳ್ಳಿ, ರತ್ಮವ್ವ ಮಾಗನೂರ, ರೇಷ್ಮಾಬಾನು ದೊಡ್ಡಮನಿ, ಶ್ರೀಕಾಂತ ಸಿದ್ದಪ್ಪನವರ, ರೇಖಾ ಪೂಜಾರ, ಕವಿತಾ ಹುಬ್ಬಳ್ಳಿ, ರತ್ನವ್ವ ಅಮಾತಿ, ರೇಣುಕಾ ಕಲ್ಲಜ್ಜೇರ, ಮಂಜಪ್ಪ ಬಾರ್ಕಿ, ಶಾಂತವ್ವ ಮಡಿವಾಳರ, ಪಾರ್ವತವ್ವ ಮರಡಿಗನವರ, ಹೊನ್ನಪ್ಪ ಮೂಲೇರ, ಶೋಭಾ ಲಿಂಗದಹಳ್ಳಿ ಕೆಂಚಮ್ಮ ಮರಡಿಗನವರ, ಮೊಬಿನಾಬಾನು ಕಿಲ್ಲೇದಾರ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ದಸರಾ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಬಿ.ಬಿ. ಅಸೂಟಿ