ರೌಂಡ್ ಟೇಬಲ್‌ ಸಮಾಜ ಸೇವೆ ಶ್ಲಾಘನೀಯ

KannadaprabhaNewsNetwork |  
Published : Nov 14, 2025, 01:30 AM IST
ಶಿವಮೊಗ್ಗದ ಸರ್ಜಿ ಫೌಂಡೇಶನ್‌ಗೆ ಸುಸಜ್ಜಿತ ಸೌಲಭ್ಯವುಳ್ಳ ಆಂಬ್ಯುಲೆನ್ಸ್ ವಾಹನವನ್ನು ಶಿವಮೊಗ್ಗ ರೌಂಡ್ ಟೇಬಲ್ 166 ಪದಾಧಿಕಾರಿಗಳು ಹಸ್ತಾಂತರ ಮಾಡಿದರು. | Kannada Prabha

ಸಾರಾಂಶ

ಆರೋಗ್ಯ, ಶಿಕ್ಷಣ ಮತ್ತು ಸಮುದಾಯದ ಸೇವೆಗೆ ಒತ್ತು ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ರೌಂಡ್ ಟೇಬಲ್ ಇಂಡಿಯಾ ನ.9 ರಿಂದ 15ರವರೆಗೆ ದೇಶದಾದ್ಯಂತ ಆರ್‌ಟಿಐ ಸಪ್ತಾಹವನ್ನು ಆಯೋಜಿಸಿದೆ. ಇದರ ಭಾಗವಾಗಿ ಶಿವಮೊಗ್ಗ ರೌಂಡ್ ಟೇಬಲ್ ಇಂಡಿಯಾ 166 ಶಿವಮೊಗ್ಗದಲ್ಲಿಯೂ ಪರಿಸರ ಜಾಗೃತಿ, ರಕ್ತದಾನ ಶಿಬಿರ, ಶಿಕ್ಷಣ ಜಾಗೃತಿಯಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ: ಆರೋಗ್ಯ, ಶಿಕ್ಷಣ ಮತ್ತು ಸಮುದಾಯದ ಸೇವೆಗೆ ಒತ್ತು ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ರೌಂಡ್ ಟೇಬಲ್ ಇಂಡಿಯಾ ನ.9 ರಿಂದ 15ರವರೆಗೆ ದೇಶದಾದ್ಯಂತ ಆರ್‌ಟಿಐ ಸಪ್ತಾಹವನ್ನು ಆಯೋಜಿಸಿದೆ. ಇದರ ಭಾಗವಾಗಿ ಶಿವಮೊಗ್ಗ ರೌಂಡ್ ಟೇಬಲ್ ಇಂಡಿಯಾ 166 ಶಿವಮೊಗ್ಗದಲ್ಲಿಯೂ ಪರಿಸರ ಜಾಗೃತಿ, ರಕ್ತದಾನ ಶಿಬಿರ, ಶಿಕ್ಷಣ ಜಾಗೃತಿಯಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಆರ್.ಟಿ.ಐ ಸಪ್ತಾಹದ ಅಂಗವಾಗಿ ಗುರುವಾರ ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಮತ್ತು ಶಿವಮೊಗ್ಗ ರೌಂಡ್ ಟೇಬಲ್ 166 ಇವರ ವತಿಯಿಂದ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಇದೇ ವೇಳೆ ಸಂಸ್ಥೆಯ ರಾಷ್ಟ್ರೀಯ ಆರೋಗ್ಯ ಯೋಜನೆ ''''''''ಪ್ರಾಜೆಕ್ಟ್ ಹೀಲ್'''''''' ಯೋಜನೆಯಡಿ, ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಸುಧಾರಿಸುವ ಗುರಿಯೊಂದಿಗೆ, ಸರ್ಜಿ ಫೌಂಡೇಶನ್‌ಗೆ ಸುಸಜ್ಜಿತ ಸೌಲಭ್ಯವುಳ್ಳ ಆಂಬ್ಯುಲೆನ್ಸ್ ವಾಹನವನ್ನು ಶಿವಮೊಗ್ಗ ರೌಂಡ್ ಟೇಬಲ್ ಪದಾಧಿಕಾರಿಗಳು ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಮನುಷ್ಯನ ಜೀವನದಲ್ಲಿ ಚಿಂತೆ ಅನ್ನುವುದು ಬೆಂಬಿಡದೆ ಕಾಡುತ್ತಿರುತ್ತದೆ. ಆ ಚಿಂತೆಯಿಂದ ಹೊರಬರಬೇಕು ಎಂದರೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ರೌಂಡ್ ಟೇಬಲ್‌ ನಂತಹ ಸಂಸ್ಥೆಗಳು ಸಮಾಜ ಸೇವೆಗೆ, ಸಮಾಜದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ ಎಂದರು.

ಶಿವಮೊಗ್ಗದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಡವರಿಗೆ ತ್ವರಿತವಾಗಿ ತಲುಪಿಸುವಲ್ಲಿ ಈ ಆಂಬ್ಯುಲೆನ್ಸ್ ಪ್ರಮುಖ ಪಾತ್ರ ವಹಿಸಲಿದ್ದು, ಸಾರ್ವಜನಿಕರಿಗೆ ದೊಡ್ಡ ಪ್ರಯೋಜನ ಒದಗಿಸಲಿದೆ. ಸಾಮಾನ್ಯವಾಗಿ ಆಂಬ್ಯುಲೆನ್ಸ್ ಸೇವೆಗೆ ಶಿವಮೊಗ್ಗ ನಗರದ 10 ಕಿಲೋ ಮೀಟರ್ ಒಳಗೆ 1,500 ಚಾರ್ಜ್ ಮಾಡಲಾಗುತ್ತದೆ ಆದರೆ ಸರ್ಜಿ ಫೌಂಡೇಶನ್ ಆಂಬ್ಯುಲೆನ್ಸ್ 500 ರು ಗೆ , 20ರಿಂದ 30 ಕಿಲೋಮೀಟರ್‌ ಗೆ 2,200 ಇದ್ದರೆ 750ಕ್ಕೆ, ಬೆಂಗಳೂರಿಗೆ ಹೋಗಲು 10,500 ಇದ್ದಾರೆ ನಾವು 7,500 ರು ಗೆ ಸೇವೆಯನ್ನು ಒದಗಿಸುತ್ತಿದೆ, ಈ ಆಂಬ್ಯುಲೆನ್ಸ್‌ನಿಂದ ತುರ್ತು ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯಕೀಯ ನೆರವು ಸಿಗುವಂತಾಗಿ ಹಲವು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಶಿವಮೊಗ್ಗ ರೌಂಡ್ ಟೇಬಲ್ 166 ನ ಛೇರ್ಮನ್ ಗುರು ಹಂಜಿ ಮಾತನಾಡಿ, ಇದು ರೌಂಡ್ ಟೇಬಲ್ ಇಂಡಿಯಾದ ಒಂದು ಪ್ರಮುಖ ಭಾಗವಾಗಿ ಇಂದು ಸರ್ಜಿ ಫೌಂಡೇಶನ್‌ಗೆ ಆಂಬ್ಯುಲೆನ್ಸ್ ಹಸ್ತಾಂತರ ಮಾಡಿದ್ದೇವೆ. ಇಲ್ಲಿಯವರೆಗೂ ರೌಂಡ್ ಟೇಬಲ್ ಇಂಡಿಯಾ ದೇಶದಲ್ಲಿ ಎಲ್ಲ ಚಾಪ್ಟರ್‌ಗಳು ಈ ಕೆಲಸ ಮಾಡುತ್ತಿದ್ದು ನಾವು ಕೂಡ ಶಿವಮೊಗ್ಗ ಚಾಪ್ಟರ್ ವತಿಯಿಂದ ಮಾಡುತ್ತಿದ್ದೇವೆ. ದೇಶದಾದ್ಯಂತ ದಿನಕ್ಕೆ 2 ಕ್ಲಾಸ್ ರೂಮ್ ಗಳನ್ನೂ ರೌಂಡ್ ಟೇಬಲ್ ನಿರ್ಮಿಸುತ್ತಿದೆ. ಇಲ್ಲಿಯವರೆಗೂ 10,040 ಕ್ಲಾಸ್ ರೂಂಗಳನ್ನೂ ದೇಶದಲ್ಲಿ ನಿರ್ಮಿಸಲಾಗಿದೆ. ಈಗಾಗಲೇ 3,960 ಪ್ರಾಜೆಕ್ಟ್ ಸಂಪೂರ್ಣವಾಗಿದೆ. ಇದರಂತೆ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಶಿವಮೊಗ್ಗ ರೌಂಡ್ ಟೇಬಲ್ 166 ವೈಸ್ ಛೇರ್ಮನ್ ಮತ್ತು ಸರ್ಜಿ ಸಮೂಹ ಸಂಸ್ಥೆ ನಿರ್ದೇಶಕ ಈಶ್ವರ್ ಸರ್ಜಿ, ಶಿವಮೊಗ್ಗ ರೌಂಡ್ ಟೇಬಲ್ ವಲಯ 13ರ ಛೇರ್ಮನ್ ಶುಶ್ರುತ್, ಶಿವಮೊಗ್ಗ ರೌಂಡ್ ಟೇಬಲ್ 266ರ ಛೇರ್ಮನ್ ಗಗನ್ ಕೋಟೆ, ಸರ್ಜಿ ಸಮೂಹ ಸಂಸ್ಥೆ ನಿರ್ದೇಶಕರಾದ ನಮಿತಾ ಸರ್ಜಿ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ವಾದಿರಾಜ್ ಕುಲಕರ್ಣಿ, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತೆಯ ವೈದ್ಯಕೀಯ ನಿರ್ದೇಶಕ ಪ್ರಶಾಂತ್.ಎಸ್.ವಿ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್ ಕುಲಕರ್ಣಿ, ರೋಟರಿ ರಕ್ತ ನಿಧಿ ಕೇಂದ್ರದ ಸತೀಶ್ ಕುಮಾರ್, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತೆಯ ವೈದ್ಯಕೀಯ ಅಧೀಕ್ಷಕ ವಿಜಯಕುಮಾರ ಮಾಯೆರ, ಸಹಾಯಕ ಆಡಳಿತಾಧಿಕಾರಿಗಳಾದ ಸಚಿನ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ