ಕೊಳದೊಳಗೆ ಅಡಗಿದ್ದ ರೌಡಿಶೀಟರ್‌ ಸೆರೆ

KannadaprabhaNewsNetwork |  
Published : Sep 03, 2026, 01:45 AM IST
ಪೊಲೀಸರಿಂದ ತಪ್ಪಿಸಿಕೊಳ್ಳಲು ಸುಮಾರು ಅರ್ಧ ಗಂಟೆ ಕಾಲ ಕೊಳದಲ್ಲಿ ಗಿಡಗಳ ಮಧ್ಯೆ ಅಡಗಿ ಕುಳಿತ್ತಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಬಂಧಿಸಿರುವ ಘಟನೆ  ಭದ್ರಾವತಿಯಲ್ಲಿ ನಡೆದಿದೆ. | Kannada Prabha

ಸಾರಾಂಶ

ಪೊಲೀಸರಿಂದ ತಪ್ಪಿಸಿಕೊಳ್ಳಲು ಸುಮಾರು ಅರ್ಧ ಗಂಟೆ ಕಾಲ ಕೊಳದಲ್ಲಿ ಗಿಡಗಳ ಮಧ್ಯೆ ಅಡಗಿ ಕುಳಿತ್ತಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಕನ್ನಡಪ್ರಭ ವಾರ್ತೆ ಭದ್ರಾವತಿ

ಪೊಲೀಸರಿಂದ ತಪ್ಪಿಸಿಕೊಳ್ಳಲು ಸುಮಾರು ಅರ್ಧ ಗಂಟೆ ಕಾಲ ಕೊಳದಲ್ಲಿ ಗಿಡಗಳ ಮಧ್ಯೆ ಅಡಗಿ ಕುಳಿತ್ತಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ರೌಡಿಶೀಟರ್‌ ದಿಲೀಪ್‌ ಬಂಧೀತನಾದವನು. ಬಂಧನದ ಆದೇಶದೊಂದಿಗೆ ನಗರಸಭೆ ವ್ಯಾಪ್ತಿಯ ಭಂಡಾರಹಳ್ಳಿಯಲ್ಲಿ ಪೊಲೀಸರು ತೆರಳಿದಾಗ ಘಟನೆ ನಡೆದಿದೆ. ಕೊಲೆ, ಕಳ್ಳತನ ಸಹಿತ 16 ಪ್ರಕರಣಗಳಲ್ಲಿ ಆರೋಪಿಯಾಗಿರುವ ರೌಡಿಶೀಟರ್ ದಿಲೀಪನ ಬಂಧನಕ್ಕೆ ನ್ಯಾಯಾಲಯ 3 ಬಾರಿ ಬಂಧನ ಆದೇಶ ಜಾರಿಗೊಳಿಸಿತ್ತು. ಆದರೂ ಈತ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಬುಧವಾರ ಖಚಿತ ಮಾಹಿತಿ ಮೇರೆಗೆ ನ್ಯೂಟೌನ್ ಠಾಣೆ ಪೊಲೀಸರು ಬಂಧನಕ್ಕೆ ತೆರಳಿದ್ದಾರೆ. ಪೊಲೀಸರು ಬರುವ ಬಗ್ಗೆ ಮಾಹಿತಿ ತಿಳಿದು ಮನೆಯಿಂದ ದಿಲೀಪ್ ಪರಾರಿಯಾಗಿದ್ದಾನೆ.

ಪೊಲೀಸರು ಸುತ್ತಮುತ್ತ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಕೊನೆಗೆ ಭಂಡಾರಹಳ್ಳಿ ಕೊಳ ಬಳಿ ದಿಲೀಪ್ ಹೋಗಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅಲ್ಲಿ ಹೋಗಿ ನೋಡಿದಾಗ ಆತ ಕಾಣಿಸಿಲ್ಲ. ಅರ್ಧ ಗಂಟೆಗಳ ಕಾಲ ಹುಡುಕಿದರೂ ಆತನ ಸುಳಿವು ಸಿಕ್ಕಿರಲಿಲ್ಲ. ಕೊನೆಗೆ ಕೊಳಕ್ಕೆ ಇಳಿದುಹೋಗಿರುವ ಜಾಡು ಪತ್ತೆ ಮಾಡಿದ ಪೊಲೀಸರು ಕೊಳದೊಳಗೆ ಇಳಿದು ಪರಿಶೀಲಿಸಿದಾಗ ನೀರಿನಲ್ಲಿದ್ದ ಗಿಡಗಳು ಬದಲಾಗಿದ್ದನ್ನು ಗಮನಿಸಿದ್ದಾರೆ. ಕೂಡಲೇ ಅಲ್ಲಿ ನೋಡಿದಾಗ ಗಿಡಗಳ ನಡುವೆ ಅವಿತು ಕುಳಿತಿರುವುದು ಪತ್ತೆಯಾಗಿದೆ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪವಿಭಾಗದ ಉಪಾಧೀಕ್ಷ ಕಪ್ರಕಾಶ್ ರಾಥೋಡ್‌ ಅವರ ಮಾರ್ಗದರ್ಶನದಲ್ಲಿ ಠಾಣಾ ಉಪ ನಿರೀಕ್ಷಕ ರಮೇಶ್ ಹಾಗೂ ಸಿಬ್ಬಂದಿ ಪ್ರಸನ್ನ ಅವರು ಭಾಗಿಯಾಗಿದ್ದರು.

----ಫೋಟೊ-----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ರೈತರ ಪ್ರತಿಭಟನೆ
ಅಧ್ಯಾಪಕರು ಕೌಶಲ್ಯಗಳನ್ನು ರೂಪಿಸಿಕೊಳ್ಳಬೇಕು: ಪ್ರೊ.ಡಿ.ಎಸ್.ಪ್ರತಿಮಾ