ರೌಡಿ ಶೀಟರ್ ಕೊಲೆ

KannadaprabhaNewsNetwork |  
Published : Oct 23, 2023, 12:15 AM IST

ಸಾರಾಂಶ

ರೌಡಿ ಶೀಟರೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.

ತುಮಕೂರು: ರೌಡಿ ಶೀಟರೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ. ಮಾರುತಿ ಅಲಿಯಾಸ್ ಪೋಲಾಡ್(35) ಕೊಲೆಯಾದ ದುರ್ದೈವಿ. ಈತ ಮೂಲತಃ ಮಧುಗಿರಿಯ ಕಂಸನಹಳ್ಳಿ ಗ್ರಾಮದವನು. ತುಮಕೂರಿನ ಮಂಚಲಕುಪ್ಪೆ ಬಳಿ ತನ್ನ ಪತ್ನಿ ಜೊತೆ ವಾಸವಾಗಿದ್ದ. ಶನಿವಾರ ಮಧ್ಯರಾತ್ರಿ ಬಂಡೆಮನೆ ಕಲ್ಯಾಣ ಮಂಟಪದ ಬಳಿಯಿದ್ದ ಮಾರುತಿಯನ್ನು ಐದು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ. ಕಳೆದ ಏಳೆಂಟು ವರ್ಷಗಳ ಹಿಂದೆ ಹಟ್ಟಿ ಮಂಜ ಎಂಬಾತನ ಕೊಲೆ ಕೇಸ್ ನಲ್ಲಿ ಈತ ಆರೋಪಿಯಾಗಿದ್ದ. ಇದೇ ದ್ಷೇಷಕ್ಕೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸರು ಭೇಟಿ ನೀಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ